ಧಾರವಾಡ –
ಧಾರವಾಡ ದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ ಮಾಡಿದ್ದಾರೆ. ಇಲಾಖೆಯ ನೌಕರ ಶಿವಶಂಕರ ಹಿರೇಮಠ ಸಾರ್ವಜನಿಕರು ಯಾವುದೇ ಕೆಲಸಕ್ಕೆ ಕಚೇರಿಗೆ ಬಂದರೆ ಸಾಕಷ್ಟು ಪ್ರಮಾಣದಲ್ಲಿ ಹಣವನ್ನು ತಗೆದುಕೊಳ್ಳುತ್ತಾರೆ ಎಂಬ ಒಂದು ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿ ಗಳು ಟ್ರ್ಯಾಪ್ ಮಾಡಿದ್ದಾರೆ.
ಎಸ್ಪಿ ಬಿ ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ಈ ಒಂದು ಕಾರ್ಯಾಚರಣೆ ಯಲ್ಲಿ ಶಿವಶಂಕರ ಹಿರೇಮಠ ಅವರ ಕಾರಿನಲ್ಲಿ ಲಕ್ಷಾಂತರ ರೂಪಾಯಿ ವಶಕ್ಕೆ ತೆಗೆದುಕೊಂಡಿದ್ದು ಸಧ್ಯ ಅವರನ್ನು ವಶಕ್ಕೆ ತೆಗೆದುಕೊಂಡಿ ರುವ ಎಸಿಬಿ ಅಧಿಕಾರಿಗಳು ವಿಚಾರಣೆ ಮಾಡತಾ ಇದ್ದಾರೆ