ಧಾರವಾಡ –
ಗ್ರಾಮ ಪಂಚಾಯತಿ ಸದಸ್ಯರಾಗಿ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಬಿಡುವಿಲ್ಲದೆ ಸುತ್ತಾಡುತ್ತಾ ಹತ್ತು ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಮಲ್ಲಿಕಾರ್ಜುನ ರಡ್ಡೇರ ಈಗ ಮತ್ತೊಂದು ಮಹತ್ವದ ಯೋಜನೆ ಆರಂಭ ಮಾಡಿದ್ದಾರೆ
ಹೌದು ಧಾರವಾಡ ಜಿಲ್ಲೆಯ ಅಲ್ಲಾಪೂರ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆ ಯಾದ ನಂತರ ಈವರೆಗೆ ಗ್ರಾಮದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿರುವ ಇವರು ಪ್ರಥಮ ಬಾರಿಗೆ ಅಲ್ಲಾಪೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಹೊಸ ಯೋಜನೆ ಆರಂಭ ಮಾಡಿದ್ದಾರೆ
ಗ್ರಾಮದ ಅಭಿವೃದ್ಧಿ ನಮ್ಮ ಗುರಿ ಎನ್ನುತ್ತಾ ಈಗ ಮತ್ತೊಂದು ಮಹತ್ವದ ಯೋಜನೆಯನ್ನು ಆರಂಭ ಮಾಡಿದರು
ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳಿಗೆ ಅನುಕೂಲ ಆಗುವಂತೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮಹೇಶ ಕುರಿಯವರ ತಾಲ್ಲೂಕ ಪಂಚಾಯತ್ ಅನುದಾನ ದಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ಅಂಗನವಾಡಿ ಕೇಂದ್ರಗ ಳಲ್ಲಿ ಅಳವಡಿಸಲಾಗಿದೆ
ಗ್ರಾಮದ ಎರಡು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ಲೇ ಕಿಟ್ ಆಟದ ಸಾಮಾನುಗಳು ಅಂಗನವಾಡಿ ಕೇಂದ್ರದ ಆವರಣದಲ್ಲಿ ಅಳವಡಿಸ ಲಾಯಿತು ಈ ಸಂದರ್ಭದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ರಡ್ಡೇರ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು