ನವದೆಹಲಿ –
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಸಿದ್ದತೆ ನಡೆದಿದ್ದು ಕಾಂಗ್ರೆಸ್ ಪ್ರಣಾಳಿಕೆ ರೂಪಿಸಲು ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಿಸಿದ್ದಾರೆ.
ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪಕ್ಷದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ
2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದಕ್ಕಾಗಿ ಕಾಂಗ್ರೆಸ್ ಪಕ್ಷ ತಯಾರಲ್ಲಿ ತೊಡಗಿದೆ.ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.