ಮಾಜಿ ಸಚಿವ ಯು ಟಿ ಖಾದರ್ ಕಾರು ಅಪಘಾತ – ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಚಿವರು ಅಪಾಯದಿಂದ ಪಾರು…..

Suddi Sante Desk

ದಾವಣಗೆರೆ –

ಮಾಜಿ ಸಚಿವ ಯು ಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದೆ.ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕ್ಕಿಡಾಗಿದೆ.

ಖಾದರ್ ಅವರು ದಾವಣಗೆರೆಯಿಂದ ಬೆಂಗಳೂರಿ ನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ ಕಾರು ಮುಂದೆ ಹೋಗುತ್ತಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ.ಅದೃ ಷ್ಟ ವಶಾತ್ ಪ್ರಾಣಹಾನಿಯಾಗಿಲ್ಲ.ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸ ಲಾಗಿದೆ.

ಅಪಘಾತ ನಡೆದ ಘಟನೆ ಬಳಿಕ ಖಾದರ್ ಅವರು ಮತ್ತೊಂದು ಕಾರಿನ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಈ ಒಂದು ಅಪ ಘಾತ ನಡೆದಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.