ಅಭಿಮಾನಿಯ ಆಸೆ ಈಡೇರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬಕ್ಕೆ ಸಾಂತ್ವನ ಹೇಳಿದ ಹೆಚ್.ಡಿ.ಕೆ

Suddi Sante Desk

ರಾಮನಗರ –

ಆಟೋ ಚಾಲಕ ಜಯರಾಮು ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ನಿನ್ನೆ ಆಟೋ ಚಾಲಕ ಜಯರಾಮು ಮೃತಪಟ್ಟಿದ್ದರು.

ಮೃತ ಆಟೋ ಚಾಲಕನ ಜೇಬಿನಲ್ಲಿ ನನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿ ಪಾಲ್ಗೊಳ್ಳಬೇಕು ನನ್ನ ಬುಧಿಮಾಂಧ್ಯ ಮಗನಿಗೆ ಏನಾದರೂ ಸಹಾಯ ಮಾಡುವಂತೆ ಜಯರಾಮು ಚೀಟಿಯೊಂದನ್ನು ಬರೆದಿಟ್ಟಿದ್ದು ಪತ್ತೆಯಾಗಿತ್ತು.

ಈ ಒಂದು ಹಿನ್ನಲೆಯಲ್ಲಿ ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ಮೃತ ಆಟೋ ಚಾಲಕನ ಅಂತ್ಯಕ್ರಿಯೆ ನಡೆಯಿತು. ಸಾವಿಗೂ ಮುನ್ನವೇ ತನ್ನ ಅಂಗಿಯಲ್ಲಿ ಡೆತ್ ನೋಟ್ ಬರೆದಿಟ್ಟುಕೊಂಡಿದ್ದ ಜಯರಾಮುವಿನ ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.

ಸಾವಿಗೀಡಾದ ಜಯರಾಮು

ನನ್ನ ಅಂತ್ಯಕ್ರಿಯೆ ಯಲ್ಲಿ‌ ಮಾಜಿ ಸಿಎಂ ಹೆಚ್.ಡಿ.ಕೆ ಭಾಗಿಯಾಗಬೇಕು.ನನಗೆ ಬುದ್ಧಿಮಾಂದ್ಯ ಮಗನಿದ್ದಾನೆ. ನನ್ನ ಮಗನಿಗೆ ಕುಮಾರಸ್ವಾಮಿ ಧನ ಸಹಾಯ ಮಾಡಬೇಕು.ನಿಮ್ಮ ಋಣವನ್ನ ಮುಂದಿನ ಜನ್ಮದಲ್ಲಿ ತೀರಿಸುತ್ತೇನೆ.ನನ್ನ ಮಗನಿಗೆ ಒಂದು ದಾರಿ ಮಾಡಿಕೊಡಿ ಕುಮಾರಣ್ಣ ಅಂತಾ ಭಾವನಾತ್ಮಕವಾಗಿ ಡೆತ್ ನೋಟ್ ಬರೆದಿಟ್ಟಿದ್ದನು ಜಯರಾಮು.

ಈ ಒಂದು ಮನವಿಗೆ ಕೊನೆಗೂ ಹೆಚ್.ಡಿ.ಕೆ ಕುಟುಂಬದವರು ಸ್ಪಂದಿಸಿದ್ದಾರೆ. ಪುತ್ರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ‌ ಕೂಡ ಭಾಗಿಯಾಗಿ ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಪರಿಹಾರದ ಹಣ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.