ಮತ್ತಷ್ಟು ‘ಲಾಕ್ ಡೌನ್’ ಸಡಿಲಿಕೆ ಕಲ್ಯಾಣ ಮಂಟಪ, ರೆಸಾರ್ಟ್, ಹೊಟೇಲ್ ಗಳಲ್ಲಿ ಮದುವೆ ಗೆ ಗ್ರೀನ್ ಸಿಗ್ನಲ್…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮಹಾಮಾರಿ ಕಡುಮೆಯಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡಲಾಗುತ್ತಿದ್ದು ಸಧ್ಯ ಕಲ್ಯಾಣ ಮಂಟ ಪ,ಹೊಟೇಲ್,ರೆಸಾರ್ಟ್ ಸೇರಿದಂತೆ ಹೊರಗಡೆ ಮದುವೆ ಮಾಡಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಿ ಆದೇಶ ನೀಡಿದೆ.ಹೌದು ಸಭೆ ಸಮಾರಂಭ ಗಳಲ್ಲಿ ಭಾಗಿಯಾಗಲು 40 ಜನರಿಗೆ ಅವಕಾಶ ನೀಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ.

ಹೌದು…..ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆ ಯಾಗುತ್ತಿರುವ ಹಿನ್ನೆಲೆ ಕಲ್ಯಾಣ ಮಂಟಪ, ಹೋಟೆ ಲ್,ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ ಮದು ವೆ ಕಾರ್ಯಕ್ರಮ ಮಾಡಲು 40 ಜನರಿಗೆ ಸೀಮಿತ ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರ ಬಗ್ಗೆ ತೀವ್ರ ನಿಗಾ ಇಡುವುದು ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನರಿಗೆ ಸೀಮಿತಗೊಳಿಸಿ ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿ ಯಾಗಲಿದೆ. ಮದುವೆ ಸಮಾರಂಭಕ್ಕೆ 40 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.

ಇನ್ನೂ, ಈಗಾಗಲೇ ಪಾಸಿಟಿವಿಟಿ ದರ ಕಡಿಮೆಗೊಂ ಡಿದ್ದಂತ ಅನೇಕ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ 2.0 ಮಾರ್ಗಸೂಚಿ ಕ್ರಮಗಳನ್ನು, ಇದೀಗ ಮುಂದುವರೆದು ಪಾಸಿಟಿವಿಟಿ ದರ ಕಡಿಮೆಗೊಂಡಂ ತ ನಾಲ್ಕು ಜಿಲ್ಲೆಗಳಲ್ಲಿಯೂ ಅನ್ ಲಾಕ್ ಮಾರ್ಗ ಸೂಚಿ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿದೆ.ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅಧಿ ಸೂಚನೆ ಹೊರಡಿಸಿದ್ದು,ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಂತ ಚಾಮರಾಜನ ಗರ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನ್ನು ಕೆಟಗರಿ 1ರ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೇ ಕೆಟೆಗರಿ 3ನೇ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯನ್ನು ಕೊರೋನಾ ಸೋಂಕಿನ ಪ್ರಕರಣಗಳ ಇಳಿಕೆಯಿಂದಾಗಿ ಕೆಟಗರಿ 2ಕ್ಕೆ ಸೇರಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.