ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಪತ್ತೆ – ಗುಡಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…..

Suddi Sante Desk

ಕುಂದಗೋಳ –

ಕುಂದಗೋಳ ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲ ದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾ ಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ.ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ 20 ಕೆಜಿ ಗಾಂಜಾ ಬೆಳೆ,ನಿಂಗಪ್ಪ ಕುಬೇರಪ್ಪ ಕರಿಕೆಣ್ಣನ ವರ ಹೊಲದಲ್ಲಿ 8 ಕೆಜಿ 30 ಗ್ರಾಂ ಗಾಂಜಾ ಬೆಳೆ ಯನ್ನು ವಶಪಡಿಸಿಕೊಳ್ಳಲಾಗಿದೆ.

ಗುಡಗೇರಿ ಪಿಎಸ್ಐ ಸವಿತಾ ಮುನ್ಯಾಳ ನೇತೃತ್ವ ದಲ್ಲಿ ಎಎಸ್ಐ ಮಠಪತಿ ಪಾಯಣ್ಣನವರ, ಎಂ.ಸಿ. ಸಾಲಿಮಠ, ಸಿಬ್ಬಂದಿ ಸದ್ದಾಂ ತಲ್ಲೂರು, ಎಸ್. ಎಮ್‌.ಹಳ್ಳದ, ಬಸನಗೌಡ ಪಾಟೀಲ್, ಗಾಯತ್ರಿ ಜೋಗಿಹಳ್ಳಿ ಭಾಗಿಯಾಗಿದ್ದರು. ಪ್ರಕರಣದ ಬಳಿಕ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಪ್ರಕರಣದ ಕುರಿತಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.