ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ…..

Suddi Sante Desk
ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ…..

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ ಹೌದು ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚು ವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ.

ಪ್ರಸ್ತುತ ಶಕ್ತಿ ಯೋಜನೆ ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು ವಾಹನ ಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾ ಗುವಂತೆ ಜುಲೈ-2023 ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತೆ ಹೆಚ್ಚುವರಿ ವೇತನವನ್ನು (ಪಾವತಿಸುವುದು ಹಾಗೂ ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಗಳನ್ನು ಕರ್ತವ್ಯದ ಮೇಲೆ ನಿಯೋಜಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರ ಆದಾಯವು ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನ ಗಳನ್ನು ನೀಡಲಾಗಿತ್ತು.

ಅನಿಲಕುಮಾರ ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.