ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್ – ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವರು ಶೀಘ್ರದಲ್ಲೇ ಕೈ ಸೇರಲಿದೆ ಹೆಚ್ಚಳದ ವೇತನ ಸಚಿವರ ಭರವಸೆ…..

Suddi Sante Desk
ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್ – ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವರು ಶೀಘ್ರದಲ್ಲೇ ಕೈ ಸೇರಲಿದೆ ಹೆಚ್ಚಳದ ವೇತನ ಸಚಿವರ ಭರವಸೆ…..

ಬೆಂಗಳೂರು

ಹೌದು ಕೆಲ ವಿಚಾರ ಗಳೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ಗೊಂದಲದಲ್ಲಿದ್ದ ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಲಾಗಿದೆ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರಿಗೆ ಇದರೊಂದಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಬಡ್ತಿ ಪಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದಾರೆ ಶೀಘ್ರವೇ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗು ವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿಯ ಡಾ.ವೈ.ಎ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಪದನ್ನೋತಿ ಪಡೆದ ದವರಿಗೆ ಕಾಲಮಿತಿ ವೇತನ ನೀಡದ ಪರಿಣಾಮ ಪದನ್ನೋತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯುತ್ತಿರುವುದರಿಂದ ಆಗುತ್ತಿರುವ ಸಮಸ್ಯೆ ಪರಿಹರಸಲು ಶೀಘ್ರದಲ್ಲೇ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡೊದಾಗಿ ಹೇಳಿದರು

ಅಲ್ಲದೆ ಈ ಒಂದು ಕುರಿತು ಚರ್ಚಿಸಿ ಕ್ರಮ ಕೈಗೊಂಡು ವೇತನ ಪಡೆಯದೇ ಇರುವ ಶಿಕ್ಷಕರ ವೇತನ, ಬಡ್ತಿ ಹೊಂದಿದ ಶಿಕ್ಷಕರಿಗಿಂತ ಹೆಚ್ಚಾಗಿ ರುವುದು ಕಂಡುಬಂದಿದೆ. ಬಹಳ ವರ್ಷಗಳಿಂದ ಈ ಸಮಸ್ಯೆಯಿದ್ದು, ಅಧಿವೇಶನದ ಬಳಿಕ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಪರಿಹಸಲು ಕ್ರಮ ವಹಿಸಲಾಗುವುದು ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.