ಬೆಂಗಳೂರು –
ಶಿಕ್ಷಕರ ವರ್ಗಾವಣೆ ಕುರಿತು ಈಗಾಗಲೇ ಅರ್ಜಿ ಸಲ್ಲಿಸಲು ಸಮಯಾವಕಾಶ ಮುಗಿದಿದ್ದು ಆದರೂ ಕೂಡಾ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶವನ್ನು ನೀಡಲಾಗಿದೆ ಹೌದು ತಾಂತ್ರಿಕ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗ ದಂತಹ ಶಿಕ್ಷಕರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೌದು ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ವರ್ಗಾವಣೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದೆ ತಾಂತ್ರಿಕ ಸಮಸ್ಯೆಯ ಕಾರಣ ಅನೇಕ ಶಿಕ್ಷಕರು ಸಲ್ಲಿಸಿದ ಅರ್ಜಿ ಸ್ವೀಕೃತವಾಗಿಲ್ಲ.ಶಿಕ್ಷಕರ ಅರ್ಜಿ ತಿರಸ್ಕರಿಸಲಾಗಿದೆ ಎಂಬ ಕುರಿತು ಸಾಕಷ್ಟು ಪ್ರಮಾಣದಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ಮನವಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿ ಗಳು ಮತ್ತೊಮ್ಮೆ ಅವಕಾಶವನ್ನು ನೀಡಿದ್ದಾರೆ ಸಾರ್ವಜನಿಕ ಶಿಕ್ಷಣ ಇಲಾಖೆ ತಾಂತ್ರಿಕ ತಂಡದೊಂ ದಿಗೆ ಚರ್ಚೆ ನಡೆಸಿದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಆದರೆ ಶಿಕ್ಷಕರು ಪ್ರಮುಖವಾಗಿ ಇಟ್ಟುಕೊಂಡಿರುವ ಬೇಡಿಕೆ ಗಳ ಅದರಲ್ಲೂ ಅವೈಜ್ಞಾನಿಕ ರೀತಿಯ ವರ್ಗಾವಣೆ ಯಲ್ಲಿ ಬದಲಾವಣೆ ಮಾಡೊದು ಅವಶ್ಯಕತೆ ಇದೆ