ಬೆಂಗಳೂರು –
ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಕೊನೆಗೂ ಶಿಕ್ಷಣ ಸಚಿವರು ಸ್ಪಂದಿಸಿದ್ದಾರೆ.ಹೌದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯ ಸಂಬಂಧ ಇತ್ತೀಚಿಗೆ ಬೆಂಗಳೂರಿನಲ್ಲಿ ಷಡಾಕ್ಷರಿ ಅವರ ಅಧ್ಯಕ್ಷತೆ ಯಲ್ಲಿ ನಡೆದ ನಿರ್ಣಯದಂತೆ ಹಾಗೇ ಅವರ ಕೋರಿಕೆಯ ಮೇರಿಗೆ ಒಂದು ಬಾರಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲು ಕೋರಿರುತ್ತಾರೆ.ಹೀಗಾಗಿ ಈ ಒಂದು ವಿಚಾರ ಕುರಿತು ಈ ಕೂಡಲೇ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸಚಿವರು ಟಿಪ್ಪಣಿ ಮೂಲಕ ಸೂಕ್ತವಾದ ಪ್ರಸ್ತಾವನೆಯನ್ನು ಮಂಡಿಸಲು ಹೇಳಿದ್ದು ಹೀಗಾಗಿ ವರ್ಗಾವಣೆಯ ನಿರೀಕ್ಷೆ ಯಲ್ಲಿರುವ ನಾಡಿನ ಸಾವಿರಾರು ಶಿಕ್ಷಕರಿಗೆ ಸಚಿವರು ಶುಭ ಸುದ್ದಿ ನೀಡಿದ್ದು ಶೀಘ್ರದಲ್ಲೇ ಆಗಲಿ ಎಂದಿದ್ದಾರೆ