This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

ಸರ್ಕಾರಿ ನೌಕರರು ಮುಷ್ಕರ ನಡೆಸುವುದು ಬೇಡ ಮನವಿ ಮಾಡಿದ CM – ರಾಜ್ಯದಲ್ಲಿ ಹೋರಾಟಕ್ಕೆ ಜೋರಾಗುತ್ತಿದೆ ಕಿಚ್ಚು ಮೂಲೆ ಮೂಲೆಗಳಿಂದ ಸಜ್ಜಾಗುತ್ತಿದ್ದಾರೆ ನೌಕರರು


ಬೆಂಗಳೂರು

7ನೇ ವೇತನ ಆಯೋಗ ಹಳೆ ಪಿಂಚಣಿ ಯೋಜನೆ ಜಾರಿಗೆ ಬೇಡಿಕೆಯನ್ನು ಮುಂದಿಟ್ಟುಕೊಂಡು ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರ ಹೋರಾಟ ನಡೆಯಲಿದೆ.ಈಗಾಗಲೇ ಈ ಒಂದು ಹೋರಾಟಕ್ಕೆ ಕರೆ ನೀಡಿರುವ ಸರ್ಕಾರಿ ನೌಕರರ ಹೋರಾಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ನೌಕರರು ಸಿದ್ದರಾಗುತ್ತಿದ್ದು ಹೋರಾಟದ ಕಿಚ್ಚು ಹೆಚ್ಚಾಗುತ್ತಿದೆ.ಮುಂಚಿತವಾಗಿ ಈ ಕುರಿತಂತೆ ಸರ್ಕಾರಕ್ಕೆ ಗಡುವು ನೀಡಿದರು ಕೂಡಾ ಮುಖ್ಯ ಮಂತ್ರಿ ಈ ಒಂದು ವಿಚಾರ ಕುರಿತಂತೆ ವಿಚಾರ ವನ್ನು ಮಾಡದೇ ನಾನು ರಾಜ್ಯದ ಸರ್ಕಾರಿ ನೌಕರರ ಸಂಪರ್ಕದಲ್ಲಿ ಇದ್ದೇನಿ ಎಂದು ಹೇಳಿದ್ದು

ಸಧ್ಯ ಈ ಒಂದು ಮುಷ್ಕರವನ್ನು ನಡೆಸೊದು ಬೇಡ ಎಂದು ಮತ್ತೆ ಮುಖ್ಯಮಂತ್ರಿ ಹೇಳಿ ಮನವಿ ಮಾಡಿದ್ದಾರೆ.ಮಾರ್ಚ್ 1ರಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಈಗಾಗಲೇ ಕರೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿಸುದ್ದಿ ಸಿಗಲಿದೆ ಹೀಗಾಗಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎನ್ನುತ್ತಾ ಮುಖ್ಯಮಂತ್ರಿ ಭರವಸೆ ನೀಡಿದರು. ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುತ್ತದೆ.

ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದ ಜೊತೆ ಸಹಕಾರ ನೀಡ ಬೇಕು ಎಂದು ಸರ್ಕಾರಿ ನೌಕರರಿಗೆ ಮನವಿ ಮಾಡಿದರು.ನಾವು ನೀಡಿದ ಮಾತಿನಂತೆ ಈಗಾಗಲೇ ಸುಧಾಕರ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದ್ದೇವೆ.

ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ.ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧರಿದ್ದೇವೆ.ಮೊದಲು ವರದಿ ಬರಲಿ ನೌಕರರ ಸಂಘ ಸ್ಪಲ್ಪ ತಾಳ್ಮೆಯಿಂದ ಇದ್ದರೆ ಎಲ್ಲರೂ ಸರಿ ಹೋಗುತ್ತದೆ ಎಂದು ಮುಖ್ಯ ಮಂತ್ರಿಗಳು ಹೇಳಿದರು.ಇನ್ನೂ ಇತ್ತ ರಾಜ್ಯದಲ್ಲಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ಹೋರಾ ಟಕ್ಕೆ ಸಜ್ಜಾಗುತ್ತಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಹೋರಾಟದ ಕಿಚ್ಚು ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಕೂಡಾ ಮಾತನಾಡಿ ಲಿಖಿತ ರೂಪದಲ್ಲಿ ಭರವಸೆ ಸಿಕ್ಕರೆ ನಾವು ಹೋರಾಟದಿಂದ ಹಿಂದೆ ಸರಿಯಲು ಸಿದ್ದರಾಗಿದ್ದೇವೆ ಎಂದಿದ್ದಾರೆ.ಅಲ್ಲದೇ 7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಹಿಂದಿನಿಂ ದಲೂ ಒತ್ತಾಯಿಸಲಾಗುತ್ತಿದೆ 2023-4ನೇ ಸಾಲಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ನಿರೀಕ್ಷೆ ಮಾಡಲಾಗಿತ್ತು.

ಆದರೆ ಅದು ಹುಸಿಯಾಗಿದೆ ಆದ್ದರಿಂದ ನೌಕರರು ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ನಡೆಸಲು ಮುಂದಾಗಿದ್ದೇವೆ ಎಂದರು.ಇನ್ನೂ ಬೆಂಗಳೂರಿ ನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು,ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ವೃಂದ ಸಂಘ ಗಳ ಅಧ್ಯಕ್ಷರು, ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಒಂದು ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದ್ದು

ಪ್ರಮುಖ ವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 01-07-2022 ರಿಂದ ಪರಿಷ್ಕೃತ ವೇತನ ಭತ್ಯೆಗಳಿಗೆ ಅರ್ಹರಾಗಿದ್ದು 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ 40 ಪಿಟ್ಮೆಂಗಟ್ ಸೌಲಭ್ಯ ವನ್ನು ದಿನಾಂಕ 01-07-2022 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಅಲ್ಲದೇ ಎನ್.ಪಿ.ಎಸ್.ರದ್ದುಗೊಳಿಸಬೇಕು. ಎನ್.ಪಿ.ಎಸ್. ನೌಕರರನ್ನು ಓ. ಪಿ. ಎಸ್. ವ್ಯಾಪ್ತಿಗೆ ತರಬೇಕು.ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಹಳೇ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸಬೇಕು ಎಂದು ಸಹ ಬೇಡಿಕೆ ಮುಂದಿಟ್ಟಿದ್ದು

ಮುಖ್ಯಮಂತ್ರಿಗಳು ಈ ಕುರಿತಂತೆ ಸರ್ಕಾರಿ ನೌಕರರೊಂದಿಗೆ ಮಾತನಾಡುತ್ತಿಲ್ಲ ಹೀಗಾಗಿ ಹೋರಾಟದ ಕಿಚ್ಚು ಜೋರಾಗುತ್ತಿದ್ದು ಏನೇನಾ ಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 


Google News Join The Telegram Join The WhatsApp

 

 

Suddi Sante Desk

Leave a Reply