ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ ಸರ್ಕಾರಿ ನೌಕರರು – ವೇತನ ಆಯೋಗದ ಅಧ್ಯಕ್ಷರ ಘೋಷಣೆಗೆ ಸರ್ಕಾರಿ ನೌಕರರಿಂದ ನಡೆಯಲಿದೆ ಅಭಿನಂದನಾ ಕಾರ್ಯಕ್ರಮ

Suddi Sante Desk
ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ ಸರ್ಕಾರಿ ನೌಕರರು – ವೇತನ ಆಯೋಗದ ಅಧ್ಯಕ್ಷರ ಘೋಷಣೆಗೆ ಸರ್ಕಾರಿ ನೌಕರರಿಂದ ನಡೆಯಲಿದೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ನೀಡವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಿತಿಗೆ ಅಧ್ಯಕ್ಷರನ್ನು ಘೋಷಣೆ ಮಾಡಿದ್ದಾರೆ.ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಸುಧಾಕರ್ ರಾವ್ ಅವರಿಗೆ ಸಮಿತಿಯ ಅಧ್ಯಕ್ಷ ಜವಾಬ್ದಾರಿಯನ್ನು ನೀಡಿದ ಬೆನ್ನಲ್ಲೇ ಈ ಒಂದು ಸಂತೋಷಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಸಂಘಟನೆಯಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು

ನಗರದ ರೇಸ್ ಕೊರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಈ ಒಂದು ಸಮಾರಂಭವು ನಡೆಯ ಲಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಾ ಗಲೇ ರಾಜ್ಯದ ಮೂಲೆ ಮೂಲೆಗಳಿಂದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು ಸರ್ಕಾರಿ ನೌಕರರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಇವರೆಲ್ಲರ ಸಮ್ಮುಖದಲ್ಲಿಯೇ ಬೆಳಿಗ್ಗೆ 11 ಗಂಟೆಗೆ ಅಭಿನಂದನಾ ಸಮಾರಂಭವು ನಡೆಯಲಿದ್ದು ಕಾರ್ಯಕ್ರಮದ ನಂತರ ಸರ್ಕಾರಿ ನೌಕರರಿಗೆ 7ನೇ ವೇತನ ಘೋಷಣೆ ಹಿನ್ನಲೆ ಯಲ್ಲಿ  7 ಲಾಡುಗಳ ಬಾಕ್ಸ್ ನ್ನು ನೀಡಲಾಗುತ್ತಿದ್ದು ಹೀಗಾಗಿ ಇವತ್ತಿನ ಕಾರ್ಯಕ್ರಮ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದ್ದು ಈ ಒಂದು ಸಂತೋಷದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸಾಕಷ್ಟು ಪ್ರಮಾಣ ದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಸರ್ಕಾರಿ ನೌಕರರು ಪಾಲ್ಗೊಂಡಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆ ಗಳನ್ನು ಮಾಡಿಕೊಳ್ಳಲಾಗಿದ್ದು ಇವರೆಲ್ಲರ ಸಮ್ಮುಖದಲ್ಲಿಯೇ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ನಾಡದೊರೆ ಅವರಿಗೆ ಪ್ರೀತಿಯಿಂದ ಅಭಿನಂದನೆ ಸಲ್ಲಿಸಿ ಗೌರವಿಸಲಿದ್ದಾರೆ.

 

ಶ್ರೀಗೌರಿ ಜೊತೆಗೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.