ಬೆಂಗಳೂರು –
ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರಕಾರ ಬದ್ಧ DK ಶಿವಕುಮಾರ್ – ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆ ಗಳ ಕುರಿತು ನಡೆಯಿತು ಮಹತ್ವದ ಸಭೆ ಹೌದು ಬೆಂಗಳೂರಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆ ಗಳ ಕುರಿತು ಮಹತ್ವದ ಸಭೆ ನಡೆಯಿತು ಇನ್ನೂ ನಡೆದ ಈ ಒಂದು ಸಭೆಯಲ್ಲಿ ಎನ್ ಇಪಿ ರದ್ದು ಕುರಿತು ಹಾಗೆ ಇತರೆ ಸಮಸ್ಯೆ ಗಳ ಬಗ್ಗೆ ಚರ್ಚೆ ಯನ್ನು ಮಾಡಲಾಯಿತು
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.
ಎನ್ಇಪಿ ಸಾಧಕ ಬಾದಕದ ಬಗ್ಗೆ ಚರ್ಚೆ ನಡೆಸಿ, ರಾಜ್ಯದಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರಕಾರ ಬದ್ಧವಾಗಿದೆ. ಕರ್ನಾಟಕದಲ್ಲಿ ತರಾತುರಿಯಲ್ಲಿ ಎನ್ಇಪಿಯನ್ನು ಜಾರಿಗೆ ಮಾಡಲಾಯಿತು.
ಇದರ ಅನೇಕ ವಿಚಾರದಲ್ಲಿ ನಮಗೆ ಒಪ್ಪಿಗೆ ಇಲ್ಲ. ತಂತ್ರಜ್ಞಾನಕ್ಕೆ ತಕ್ಕಂತೆ ಶಿಕ್ಷಣ ಇರಬೇಕು. ಅದಕ್ಕಾಗಿ ಹೊಸ ಪಾಲಿಸಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಎನ್ಇಪಿ ರದ್ದು ಮಾಡುತ್ತಿದ್ದೇವೆ. ಆದಷ್ಟು ಬೇಗ ಸಮಿತಿ ರಚಿಸಿ ಹೊಸ ಶಿಕ್ಷಣ ನೀತಿ ಜಾರಿಗೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..