ಅನುಮತಿ ಇಲ್ಲದೇ ಸರ್ಕಾರಿ ನೌಕರರು ಅಧಿಕಾರಿಗಳು ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ CS ಸೂಚನೆ – ರಾಜ್ಯದ ನೌಕರರಿಗೆ ಅಧಿಕಾರಿಗಳಿಗೆ ಮಹತ್ವದ ಸಂದೇಶ…..

Suddi Sante Desk
ಅನುಮತಿ ಇಲ್ಲದೇ ಸರ್ಕಾರಿ ನೌಕರರು ಅಧಿಕಾರಿಗಳು ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ CS ಸೂಚನೆ – ರಾಜ್ಯದ ನೌಕರರಿಗೆ ಅಧಿಕಾರಿಗಳಿಗೆ ಮಹತ್ವದ ಸಂದೇಶ…..

ಬೆಂಗಳೂರು  –

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿದೆ.ಹೀಗಾಗಿ ಚುನಾವಣೆಯ ನೀತಿ ಸಂಹಿತೆ ಅನುಷ್ಠಾನಗೊಳಿ ಸಲು ಸರ್ಕಾರಿ ಅಧಿಕಾರಿಗಳು,ಸಿಬ್ಬಂದಿ ವರ್ಗದ ವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕ ವರ್ಗದ ವರು ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂ ತಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ

ಇಲಾಖೆ ಮುಖ್ಯಸ್ಥರ ಪೂರ್ವಾನುಮತಿ ಪಡೆದು ಕೊಳ್ಳದೇ ತಮ್ಮ ಕೇಂದ್ರ ಸ್ಥಾನ ಬಿಡದೇ ಇರು ವಂತೆ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಇಲಾಖೆ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ. ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟು ನಿಟ್ಟಾಗಿ ಕ್ರಮ ವಹಿಸುವಂತೆ ನಿರ್ದೇಶಿಸಲು ತಿಳಿಸಲಾಗಿದೆ.

ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೆ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.