ಹೊರ ಬಿತ್ತು ಸರ್ಕಾರಿ ನೌಕರರ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಉದ್ಘಾಟನಾ ಸಮಾರಂಭಕ್ಕೆ ಯಾರು ಬರತಾರೆ…..ಕಂಪ್ಲೀಟ್ ಮಾಹಿತಿ…..

Suddi Sante Desk

ಬೆಂಗಳೂರು –

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಅಕ್ಟೋಬರ್ 22 ರಿಂದ ದಾವಣಗೆರೆ ಯಲ್ಲಿ ನಡೆಯಲಿವೆ.ಮೂರು ದಿನಗಳ ಕಾಲ ಈ ಒಂದು ಕಾರ್ಯಕ್ರಮ ಗಳು ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆಯಲಿದ್ದು ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಯನ್ನು ದಾವಣಗೆರೆ ಜಿಲ್ಲಾಡಳಿತ ಮತ್ತು ಸರ್ಕಾರಿ ನೌಕರರ ಸಂಘ ಯುವ ಜನ ಮತ್ತು ಕ್ರೀಡಾ ಇಲಾಖೆ ಮಾಡಿಕೊಂಡಿದೆ

ಇದು ಒಂದು ವಿಚಾರವಾದರೆ ಇನ್ನೂ ಪ್ರಮುಖವಾಗಿ ಈ ಒಂದು ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಮಂತ್ರಣ ಪತ್ರಿಕೆ ತುಂಬಾ ಚನ್ನಾಗಿ ಮಾಡಲಾಗಿದೆ.ಅಚ್ಚು ಕಟ್ಟಾಗಿ ಇದನ್ನು ಮುದ್ರಣ ದೊಂದಿಗೆ ಸಿದ್ದ ಮಾಡಲಾಗಿದೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಒಂದು ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಲಿದ್ದಾರೆ ಇವರೊಂದಿಗೆ ಹಲವು ಗಣ್ಯಾತಿ ಗಣ್ಯರು ಪಾಲ್ಗೊಳ್ಳ ಲಿದ್ದಾರೆ.ಹಾಗೇ ಸ್ಥಳೀಯ ಜನಪ್ರತಿನಿಧಿಗಳು ಕೂಡಾ ಆಗಮಿಸಲಿದ್ದಾರೆ.

ಜೊತೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು ಇದಕ್ಕಾಗಿ ಸಿದ್ದತೆ ಮಾಡಲಾಗಿದೆ. ಒಟ್ಟಾರೆ ಬೆಣ್ಣೆ ನಗರಿ ದಾವಣಗೆರೆ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಮಧುವಣ ಗಿತ್ತಿಯಂತೆ ಸಿದ್ದವಾಗುತ್ತಿದ್ದು ಪಾಲ್ಗೊಳ್ಳುವ ಸರ್ಕಾರಿ ನೌಕರರಿಗೆ ಆಲ್ ದಿ ಬೆಸ್ಟ್.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.