ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ.ಹೌದು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು ಎಲ್ಲಾ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಈ ಮೂಲಕ ಬಡ್ತಿಗಾಗಿ ಕಾಯುವ ಸರ್ಕಾರಿ ನೌಕರರ ಸಂಕಷ್ಟ ತಪ್ಪಲಿದೆ.
ಈ ಹಿಂದೆ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯ ವಾಗಿ ಮುಂಬಡ್ತಿ ನೀಡುವ ಕುರಿತು ಕ್ರಮ ಕೈಗೊಂಡು ಅನುಪಾಲನಾ ವರದಿ ಕಳುಹಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನವೆಂಬರ್ 15 ರಂದು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದು ಹೀಗಾಗಿ ಈ ಒಂದು ಆದೇಶವು ಶೀಘ್ರದಲ್ಲೇ ಹೊರ ಬೀಳಲಿದ್ದು ಇನ್ನೂ ಶಿಕ್ಷಕರಿಗೆ ಇದು ಕೂಡಾ ಅನ್ವಯ ಆಗಲಿದೆಯಾ ಅಥವಾ ಯಾವುದೇ ಇಲಾಖೆಗೆ ಯಾರಿಗೂ ಇಲ್ಲದ ವರ್ಗಾವಣೆ ಯ ನೀತಿ ಇಲ್ಲೂ ತರಲಿದ್ದಾರೆನಾ ಕಾದು ನೋಡಬೇಕು