ಗುರುಲಿಂಗಸ್ವಾಮಿ ಕುಟುಂಬಕ್ಕೆ ನೆರವಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರಾದ ಗುರುಲಿಂಗಸ್ವಾಮಿ ಪತ್ನಿ ದೀಪಾ ಹೊಳಿಮಠ ಗೆ ಸರ್ಕಾರಿ ಕೆಲಸ ನೀಡಿ ಆದೇಶ…..

Suddi Sante Desk

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ನಿಧನದ ನಂತರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವಾಗಿದ್ದಾರೆ.ಹೌದು ಗುರುಲಿಂಗಸ್ವಾಮಿ ಅವರ ಪತ್ನಿ ಗೆ ಸರ್ಕಾರಿ ಕೆಲಸ ನೀಡಿ ಆದೇಶವನ್ನು ಮಾಡಿ ದ್ದಾರೆ.

ಇದೀಗ ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ ಮೃತ ಗುರುಲಿಂ ಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಸಿಎಂ ಆದೇಶಿಸಿದ್ದಾರೆ.ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಯವರ ಸಚಿವಾಲಯಕ್ಕೆ 115 ಗ್ರೂಪ್-ಸಿ ಗುತ್ತಿಗೆ ಹುದ್ದೆಗಳನ್ನು ನೇಮಕಕ್ಕೆ ಆದೇಶಿಸಲಾಗಿತ್ತು.ಈ ಹುದ್ದೆಗಳಲ್ಲಿ ಒಂದು ಹುದ್ದೆಯ ನೇಮಕಾತಿ ಬಾಕಿ ಉಳಿದಿತ್ತು.ಆ ಹುದ್ದೆಗೆ ಶ್ರೀಮತಿ ದೀಪ ಗುರುಲಿಂಗಸ್ವಾಮಿ ಹೆಚ್ ಬಿ ನೇಮಕ ಮಾಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ದೀಪಾ ಗುರುಲಿಂಗಸ್ವಾಮಿ ಅವರನ್ನು, ಮುಖ್ಯಮಂತ್ರಿಗಳ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಸಂಚಿತ ವೇತನ ರೂ.30,350ರಂತೆ ದಿನಾಂಕ 06-09-2022ರಿಂದ ಜಾರಿಗೆ ಬರುವಂತೆ ನೇಮಕ ಮಾಡಿಕೊಳ್ಳಲು ಆದೇಶಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.