ಹೊಸ ವರುರ್ಷಕ್ಕೆ ಶುಭಕೋರಿ ರಸ್ತೆಯಲ್ಲಿ ಬರೆಯಲು ಮುಂದಾದ್ರು – ಮುಂದೇ ಆಗಿದ್ದೇ ಬೇರೆ – ಹೀಗೂ ಆಗುತ್ತದೆನಾ

Suddi Sante Desk

ಉಡುಪಿ –

ಹೊಸವರ್ಷಕ್ಕೆ ಶುಭಕೋರಿ ರಸ್ತೆಯಲ್ಲಿ ಬರೆಯಲು ಮುಂದಾದ ಯುವಕರಿಬ್ಬರು ಸಾವಿಗೀಡಾದ ಘಟನೆ ಉಡುಪಿಯಲ್ಲಿ ನಡೆದಿದೆ. ತಡರಾತ್ರಿ ಹನ್ನೇರಡು ಘಂಟೆಯಾಗುತ್ತಿದ್ದಂತೆ ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯುತ್ತಿದ್ದರು. ಈ ಒಂದು ವೇಳೆ ಭೀಕರ ಅಪಘಾತವಾಗಿದೆ.

ರಸ್ತೆ ಅಪಘಾತಕ್ಕೆ ಇಬ್ಬರು ಯುವಕರು ಬಲಿಯಾಗಿದ್ದಾರೆ. ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಶರಣ್ (32) ಸಿದ್ದು (28 ) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಂತರ ಮೃತಪಟ್ಟ ಯುವಕರಾಗಿದ್ದಾರೆ.ಇವರಿಬ್ಬರೂ ಮೂಲತಃ ಬಾಗಲಕೋಟೆಯವರಾದ ಶರಣ್ ಮತ್ತು ಸಿದ್ದು ಜೆಸಿಬಿ ಮತ್ತು ಟಿಪ್ಪರ್ ಡ್ರೈವರ್ ಗಳಾಗಿ ಕೆಲಸ ಮಾಡುತ್ತಿದ್ದರು.

ಯುವಕರು ನಿನ್ನೆ ತಡರಾತ್ರಿ ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಮುಂದಾಗಿದ್ದರು ಈ ವೇಳೆ ಮಿತಿ ಮೀರಿದ ವೇಗದಲ್ಲಿ ಬಂದ ಈಕೋ ಕಾರು ಡಿಕ್ಕಿಯಾಗಿದೆ.ಅಪಘಾತದ ತೀವ್ರತೆಗೆ ಓರ್ವ ಸ್ಥಳದಲ್ಲೇ ಸಾವಿಗೀಡಾದರೆ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವಿಗೀಡಾದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.