ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಅತಿಯಾದ ಸಾಲದಿಂದ ಬೇಸತ್ತ ಕುಮಾರ್ ಆತ್ಮಹತ್ಯೆ…..

Suddi Sante Desk

ಬೆಂಗಳೂರು –

ಅತಿಯಾದ ಸಾಲದಿಂದ ಬೇಸತ್ತ ಹೆಡ್ ಕಾನ್ಸ್‌ಟೇಬಲ್ ರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿ‌‌ನಲ್ಲಿ ನಡೆದಿದೆ.ಹೌದು ಸಶಸ್ತ್ರ ಪಡೆಯ (ಸಿಎಆರ್‌) ಪಶ್ಚಿಮ ವಿಭಾಗದ ಹೆಡ್ ಕಾನ್‌ಸ್ಟೆಬಲ್ ಕುಮಾರ್ (38) ಎಂಬುವರು ಆತ್ಮಹತ್ಯೆ ಮಾಡಿಕೊಂಡಿವ ರಾಗಿದ್ದಾರೆ

ಕುಮಾರ್ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿ ಕೊಠಡಿ ಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದ ಕುಮಾರ್ ಕಚೇರಿ ಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ

ಜೀವನ ನಿರ್ವಹಣೆ ಹಾಗೂ ಇತರೆ ಕೆಲಸಕ್ಕಾಗಿ ಸಾಲ ಮಾಡಿಕೊಂಡಿದ್ದ ಕುಮಾರ್ ಅದನ್ನು ವಾಪಸು ತೀರಿಸಲಾ ಗದೇ ಸಂಕಷ್ಟಕ್ಕೆ ಸಿಲುಕಿದ್ದರು ಎಂಬುದಾಗಿ ಗೊತ್ತಾಗಿದೆ. ಸಾಲದ ವಿಷಯವನ್ನೇ ಅವರು ಮರಣಪತ್ರದಲ್ಲಿ ಬರೆದಿ ದ್ದಾರೆ.ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.