ಮುಖ್ಯಶಿಕ್ಷಕ ಅಮಾನತು – ಮುಖ್ಯಶಿಕ್ಷಕ ರುದ್ರಗೌಡ ಗೋಣಿ ಅಮಾನತು ಮಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ…..

Suddi Sante Desk
ಮುಖ್ಯಶಿಕ್ಷಕ ಅಮಾನತು – ಮುಖ್ಯಶಿಕ್ಷಕ ರುದ್ರಗೌಡ ಗೋಣಿ  ಅಮಾನತು ಮಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ…..

ಯಲಬುರ್ಗಾ

ಮುಖ್ಯಶಿಕ್ಷಕರೊಬ್ಬರನ್ನು ಅಮಾನತು ಮಾಡಿದ ಘಟನೆ ಯಲಬುರ್ಗಾ ದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ನಂ.1 ಶಾಲೆಯಲ್ಲಿ ಎರಡು ಚೀಲ ತೊಗರಿ ಬೇಳೆ ಕಳ್ಳತನವಾಗಿರುವ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡದೇ ನಿರ್ಲಕ್ಷಿಸಿ ದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಕಾಯ್ದಿರಿಸಿ ಶಾಲೆಯ ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅಮಾನತು ಮಾಡಿದ್ದಾರೆ.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ಕೂಡ ಶಾಲೆಗೆ ಭೇಟಿ ನೀಡಿ ಕಳ್ಳತನ ಆಗಿರುವ ಬಗ್ಗೆ ದೃಢಪಡಿಸಿದ್ದರು. ಆದರೂ ಈ ಬಗ್ಗೆ ಠಾಣೆಗೆ ದೂರು ನೀಡದೇ ನಿರ್ಲಕ್ಷಿಸಿದ್ದು ಕರ್ತವ್ಯ ಲೋಪ ಎಸಗಿದ್ದಾರೆಂದು ಪರಿಗಣಿಸಿ ಕೆಸಿಎಸ್‍ಆರ್ ನಿಯಮಾವಳಿ ಪ್ರಕಾರ ಅಮಾನತು ಮಾಡಲಾ ಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಯಲಬುರ್ಗಾ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.