This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State Newsಬೆಂಗಳೂರು ನಗರ

ಪದವೀಧರ 15 ಸಾವಿರ ಶಿಕ್ಷಕರ ನೇಮಕಾತಿಗೆ ಬ್ರೇಕ್ ಹಾಕಿದ ಹೈಕೋರ್ಟ್ – ನೇಮಕಾತಿಯ ಅನುಪಾತದಲ್ಲಿ ಅನ್ಯಾಯದ ವಿರುದ್ದ ತಡೆಯಾಜ್ಞೆ ನೀಡಿದ ಹೈಕೋರ್ಟ್

ಪದವೀಧರ 15 ಸಾವಿರ ಶಿಕ್ಷಕರ ನೇಮಕಾತಿಗೆ ಬ್ರೇಕ್ ಹಾಕಿದ ಹೈಕೋರ್ಟ್ – ನೇಮಕಾತಿಯ ಅನುಪಾತದಲ್ಲಿ ಅನ್ಯಾಯದ ವಿರುದ್ದ ತಡೆಯಾಜ್ಞೆ ನೀಡಿದ ಹೈಕೋರ್ಟ್
WhatsApp Group Join Now
Telegram Group Join Now

ಬೆಂಗಳೂರು 

ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಮುಕ್ತಾಯ ಗೊಳಿಸಿ ಕಳೆದ ವಾರವಷ್ಟೇ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ.ಹೌದು ನೇಮಕಾತಿಯ ಈ ಒಂದು ಅಂತಿಮ 1.1 ಪಟ್ಟಿಯಲ್ಲಿ ಅನ್ಯಾಯವಾಗಿದೆ ಎಂದಕೊಂಡು ಮಹಿಳಾ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು ಈ ಕುರಿತಂತೆ ಸುಧೀರ್ಘವಾಗಿ ವಿಚಾರಣೆಯನ್ನು ಮಾಡಿದ ನ್ಯಾಯಾಲಯ ಇಂದು ಅಂತಿಮವಾಗಿ ಈ ಒಂದು ಪಟ್ಟಿಗೆ ಬ್ರೇಕ್ ಹಾಕಿದೆ.

ಇದರೊಂದಿಗೆ ಶಿಕ್ಷಕರ ನೇಮಕಾತಿಗೆ ಹಿನ್ನಡೆ ಯಾದಂತವಾಗಿದ್ದು 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ.ಇನ್ನೂ ರಾಜ್ಯದಲ್ಲಿ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳು ನಿರಾಶರಾಗುವಂಥ ಬೆಳವಣಿಗೆಯೊಂದು ಈ ಮೂಲಕ ಕಂಡು ಬಂದಿದ್ದು 15 ಸಾವಿರ ಪದವೀಧರ ಶಾಲಾಶಿಕ್ಷಕರ ನೇಮಕಾತಿಗೆ ಸಂಬಂಧಿದಂತೆ ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮ ಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು,

ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು.ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿ ದ್ದವು ಈ ಮಧ್ಯೆ ಶಿಕ್ಷಕರ ನೇಮಕಾತಿ ಸಂಬಂಧ ಹೊರಡಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ವಿರುದ್ಧ ಅಕ್ಷತಾ ಚೌಗಲೆ ಎಂಬವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಟವಾಗಿ ರುವ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಡೆ ಹಿಡಿದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್


Google News

 

 

WhatsApp Group Join Now
Telegram Group Join Now
Suddi Sante Desk