ಬೆಂಗಳೂರು
ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಮುಕ್ತಾಯ ಗೊಳಿಸಿ ಕಳೆದ ವಾರವಷ್ಟೇ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ.ಹೌದು ನೇಮಕಾತಿಯ ಈ ಒಂದು ಅಂತಿಮ 1.1 ಪಟ್ಟಿಯಲ್ಲಿ ಅನ್ಯಾಯವಾಗಿದೆ ಎಂದಕೊಂಡು ಮಹಿಳಾ ಅಭ್ಯರ್ಥಿಯೊಬ್ಬರು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು ಈ ಕುರಿತಂತೆ ಸುಧೀರ್ಘವಾಗಿ ವಿಚಾರಣೆಯನ್ನು ಮಾಡಿದ ನ್ಯಾಯಾಲಯ ಇಂದು ಅಂತಿಮವಾಗಿ ಈ ಒಂದು ಪಟ್ಟಿಗೆ ಬ್ರೇಕ್ ಹಾಕಿದೆ.
ಇದರೊಂದಿಗೆ ಶಿಕ್ಷಕರ ನೇಮಕಾತಿಗೆ ಹಿನ್ನಡೆ ಯಾದಂತವಾಗಿದ್ದು 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ.ಇನ್ನೂ ರಾಜ್ಯದಲ್ಲಿ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳು ನಿರಾಶರಾಗುವಂಥ ಬೆಳವಣಿಗೆಯೊಂದು ಈ ಮೂಲಕ ಕಂಡು ಬಂದಿದ್ದು 15 ಸಾವಿರ ಪದವೀಧರ ಶಾಲಾಶಿಕ್ಷಕರ ನೇಮಕಾತಿಗೆ ಸಂಬಂಧಿದಂತೆ ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮ ಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು,
ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು.ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿ ದ್ದವು ಈ ಮಧ್ಯೆ ಶಿಕ್ಷಕರ ನೇಮಕಾತಿ ಸಂಬಂಧ ಹೊರಡಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ವಿರುದ್ಧ ಅಕ್ಷತಾ ಚೌಗಲೆ ಎಂಬವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಟವಾಗಿ ರುವ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಡೆ ಹಿಡಿದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್