ಬೆಳಗಾವಿ –
ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61) ವಿಧಿವಶ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿ ಗಳಿಗೆ ಬುಧವಾರ ಇಂದು ರಜೆ ಘೋಷಿಸಲಾಗಿದೆ.ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗ ಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬಾಗೇವಾ ಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ ಸಕಲ ಸರ್ಕಾರಿ ಗೌರವಗಳನ್ನ ನೀಡಲು ನಿರ್ಧರಿಸಿದ್ದೇವೆ.ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.
ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆ ದಿದ್ದಾರೆ.ಮೊನ್ನೆ ಬೆಳಗಾವಿಯಿಂದ ಬೆಂಗಳೂರಿಗೆ ಹೋಗಿದ್ದ ಉಮೇಶ್ ಕತ್ತಿ, ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿದ್ದಾಗಲೇ ಬಾತ್ ರೂಮ್ ನಲ್ಲಿ ಕುಸಿದು ಬಿದ್ದಿ ದ್ದರು.ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ತೀವ್ರ ಹೃದಯಾ ಘಾತ ಆಗಿದ್ರಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.