ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಮುಂದುವರೆದ ಮಳೆಯ ಅಬ್ಬರ ಎಲ್ಲೇಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ…..

Suddi Sante Desk
ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಮುಂದುವರೆದ ಮಳೆಯ ಅಬ್ಬರ ಎಲ್ಲೇಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ…..

ಬೆಂಗಳೂರು

ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ – ಮುಂದುವರೆದ ಮಳೆಯ ಅಬ್ಬರ ಎಲ್ಲೇಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೋಡಿ…..

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಬಿಟ್ಟು ಬಿಡಲಾರದೇ ಮಳೆರಾಯ ಸುರಿಯುತ್ತಿದ್ದು ಮುಂಜಾಗೃತೆಯ ಹಿನ್ನಲೆಯಲ್ಲಿ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಹೌದು ಬೆಳಗಾವಿ, ಕೊಡಗು, ಕರಾವಳಿ,ಸೇರಿದಂತೆ ಉತ್ತರ ಕರ್ನಾಟಕ ಕೆಲ ಭಾಗಗಳ ಶಾಲೆಗಳಿಗೆ ರಜೆಯನ್ನು ಷೋಷಣೆ ಮಾಡಲಾಗಿದೆ. ತಡವಾ ದರೂ ಕೂಡಾ ಮುಂಗಾರು ಮಳೆ ಆರ್ಭಟಿಸುತ್ತಿದೆ ನಾಳೆಯೂ ಮಳೆ ಮುಂದುವರೆಯುವ ಕಾರಣ ದಿಂದಾಗಿ ರಾಜ್ಯದ ಕೆಲ ಜಿಲ್ಲೆಗಳ ಶಾಲಾ ಕಾಲೇಜು ಗಳಿಗೆ ಮಂಜಾಗೃತೆಯ ಹಿನ್ನಲೆಯಲ್ಲಿ ರಜೆಯನ್ನು ಘೋಷಣೆ ಮಾಡಲಾಗಿದೆ.

ಮಡಿಕೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಡಿಕೇರಿ ಜಿಲ್ಲೆಯಲ್ಲಿ ಸತತ ಕೆಲದ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾ ಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ವಾಗಿ ಸೋಮವಾರ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯಾಧ್ಯಂತ ಮಳೆರಾಯ ಆರ್ಭ ಟಿಸಿದ್ದಾನೆ.ಧಾರಾಕಾರವಾಗಿ ಸುರಿಯುತ್ತಿರುವ ಈ ಒಂದು ಒಂದು ಮಳೆಯಿಂದಾಗಿ ಜಿಲ್ಲೆಯ ಜನರು ಭಯಗೊಂಡಿದ್ದು ಭಾರೀ ಮಳೆ ಮುಂದುವರಿದ ಹಿನ್ನಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿ ಸಿದ್ದು ನಾಳೆಯೂ ಜಿಲ್ಲೆಯಲ್ಲಿ ಮಳೆ ಮುಂದುವ ರೆಯುವುದಾಗಿ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಇತ್ತ ಉತ್ತರ ಕನ್ನಡ ಜಿಲ್ಲೆಯೂ ಕೂಡಾ ಮಳೆರಾಯ ಆರ್ಭಟಿಸುತ್ತಿದ್ದು ಮಕ್ಕಳ ಸುರಕ್ಷತೆಯ ಕಾರಣದಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಕಾರಣದಿಂದಾಗಿ ಶನಿವಾ ರದಂದು ರಜೆ ಘೋಷಣೆ ಮಾಡಲಾಗಿತ್ತು. ಮಳೆಯ ಅಬ್ಬರ ಜೋರಾಗಿದ್ದ ಕಾರಣದಿಂದಾಗಿ ಸೋಮವಾರದ ಕೂಡಾ ಜಿಲ್ಲೆಯಲ್ಲಿ ಮಳೆ ಮುಂದುವರೆಯುವ ಕಾರಣದಿಂದಾಗಿ ಜಿಲ್ಲಾಧಿ ಕಾರಿ ನಿತೇಶ್ ಪಾಟೀಲ್ ಜಿಲ್ಲೆಯ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಯನ್ನು ನೀಡಿ ಆದೇಶಿಸಿದ್ದಾರೆ.

ಧಾರವಾಡ

ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜು ಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿ ಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ವರ್ಗಗಳನ್ನು ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾ ಣಿಕೆ ಮಾಡಿಕೋಳ್ಳಬೇಕು.ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜು ಗಳಿಗೆ ಸಂಭಂದಿಸಿದ ಅಧಿಕಾರಿಗಳು ತಮಗೆ ಸಂಬಂಧಿಸಿದ ಸಂಸ್ಥೆಗಳಿಗೆ ಮಾಹಿತಿ ನೀಡಿ ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.