ಹಾಸನ –
ಹಾಸನ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ವರುಣನ ಅಬ್ಬರದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲ್ಲೂಕು ಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಜಿಲ್ಲೆಯ ಹಲವೆಡೆ ಎಡಬಿಡದೆ ಸುರಿಯುತ್ತಿರುವ ಮಳೆ ಯಿಂದಾಗಿ ಅಲ್ಲದೆ ಸಕಲೇಶಪುರ,ಆಲೂರು, ಅರಕಲ ಗೂಡು,ಬೇಲೂರಿನಲ್ಲಿ ಮುಂದುವರೆದ ಮಳೆ ಆರ್ಭಟ ದಿಂದಾಗಿ ಆಲೂರು,ಸಕಲೇಶಪುರ, ಅರಕಲಗೂಡು ಬೇಲೂರು ತಾಲ್ಲೂಕುಗಳ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆಯನ್ನು ಮಾಡ ಲಾಗಿದೆ.
ಹೇಮಾವತಿ ಜಲಾಶಯಕ್ಕೆ 41420 ಕ್ಯೂಸೆಕ್ ಒಳಹರಿವು ಜಲಾಶಯದಿಂದ 38000 ಕ್ಯೂಸೆಕ್ ನೀರು ಹೊರಹರಿವು ಬೀಡಲಾಗುತ್ತಿದೆ ಹೀಗಾಗಿ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾ ಗಿದೆ