ಶಾಲಾ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ರಜೆ ಘೋಷಣೆ ಆದೇಶ……

Suddi Sante Desk
ಶಾಲಾ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ರಜೆ ಘೋಷಣೆ ಆದೇಶ……

ಬೆಂಗಳೂರು

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಗುರುವಾರ (ಜುಲೈ 23) ರಂದು ದಕ್ಷಿಣ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಕರಾವಳಿ ಮೂರು ಜಿಲ್ಲೆಗಳಲ್ಲಿ ಕೆಲವು ದಿನಗಳಲ್ಲಿ ಭಾರೀ ಮಳೆ ಆಗುತ್ತಿದೆ. ಜುಲೈ 23ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಕನಿಷ್ಠ 115 ರಿಂದ 200 ಮಿಲಿ ಮೀಟರ್ ವರೆಗೆ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸ ದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಜೊತೆಗೆ ಆದೇಶದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗ ದಂತೆ ಪಾಲಕರು ಜಾಗ್ರತೆ ವಹಿಸಬೇಕು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚಿಸಿದ್ದು, ಉಲ್ಲಂಘಿ ಸಬಾರದು.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿ ಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಇನ್ನೂ ಈ ಭಾಗಕ್ಕೆ ಬರುವ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ನಿರ್ದೇಶನವಿರುತ್ತದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.