This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

Local News

SSLC ಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಗಳಿಗೆ ಸನ್ಮಾನ ಜಿಲ್ಲಾಡಳಿತ ಮತ್ತು ಇಲಾಖೆ ಯಿಂದ ಗೌರವ…..

WhatsApp Group Join Now
Telegram Group Join Now

ಧಾರವಾಡ –

ಈ ಬಾರಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮವಾಗಿ ಬಂದಿದೆ.ಬರುವ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ದಾಖಲಿಸಲು ಈಗಿನಿಂದಲೇ ಸ್ಪಷ್ಟ ಕ್ರಿಯಾ ಯೋಜನೆ ಹಾಕಿಕೊಳ್ಳಬೇಕು.ಎಸ್ ಎಸ್ ಎಲ್ ಸಿ ನಂತರ ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗು ಣವಾದ ಕೋರ್ಸುಗಳ ಆಯ್ಕೆ ಮಾಡಿ ಅಧ್ಯಯನ ಮಾಡುವ ಸ್ವಾತಂತ್ರ್ಯವನ್ನು ಪಾಲಕರು ಮಕ್ಕಳಿಗೆ ನೀಡಬೇಕು ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ನಂತರ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಜಾಣ್ಮೆ,ಜವಾಬ್ದಾರಿ ಬೆಳೆಸಿ ಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಪಂ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ 2021-22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಆಸಕ್ತಿ,ಅಭಿರುಚಿಗೆ ಅನುಗುಣವಾಗಿ ಭವಿಷ್ಯ ರೂಪಿಸಲು ಪಾಲಕರು ಪ್ರೋತ್ಸಾಹಿಸಬೇಕು ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಅಧ್ಯಯ ನದ ವಿಷಯ,ವೃತ್ತಿ ಆಯ್ದುಕೊಳ್ಳಲು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಬೇಕು.ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದೆ.ಬರುವ ವರ್ಷ ಎಸ್ ಎಸ್ ಎಲ್ ಸಿ ಮಕ್ಕಳ ಫಲಿತಾಂಶದಲ್ಲಿ ಇನ್ನಷ್ಟು ಸುಧಾರ ಣೆ ತರಲು ಸ್ಪಷ್ಟ ಕ್ರಿಯಾ ಯೋಜನೆ ತಯಾರಿಸಿಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಿನಿಂದಲೇ ಪ್ರಯತ್ನ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಮಾತನಾಡಿ ಇಂದಿನ ಮಕ್ಕಳ ಅಂಕ ಗಳಿಕೆಯ ಪ್ರಮಾಣ ನೋಡಿದರೆ ಇನ್ನು ಮುಂದೆ ಸ್ಪರ್ಧೆಯ ಗುಣಮಟ್ಟ ಹೆಚ್ಚಾಗುತ್ತದೆ.ಯಶಸ್ಸಿನ‌ ಅಹಂ‌ ತಲೆಗೆ ಏರಿಸಿ ಕೊಳ್ಳದೇ ಭವಿಷ್ಯ ರೂಪಿಸಿಕೊಳ್ಳಲು ಕಠಿಣ ಪರಿಶ್ರಮ ಮುಂದುವರೆಸಬೇಕು.ರಾಷ್ಟ್ರೀಯ,ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ನಮ್ಮನ್ನು ನಾವು ಸಿದ್ಧಮಾಡಿಕೊಳ್ಳ ಬೇಕು ಎಂದರು.

ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ 29,569 ವಿದ್ಯಾರ್ಥಿ ಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು 25,120 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 84.95 ರಷ್ಟು ಸಾಧನೆ ಮಾಡಲಾಗಿದೆ.ಓರ್ವ ವಿದ್ಯಾರ್ಥಿ 625, ಆರು ಜನ 624 ಹಾಗೂ ಏಳು ಜನ 623 ಅಂಕಗಳನ್ನು ಗಳಿಸಿ ರಾಜ್ಯದ ಮೊದಲ ಮೂರು ರಾಂಕ್ ವಿಜೇತರ ಸಾಲಿನಲ್ಲಿ ಇದ್ದಾರೆ.

ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದವರಲ್ಲಿ ಒಬ್ಬರಾಗಿರುವ ಹುಬ್ಬಳ್ಳಿ ಚೇತನ್ ಪಬ್ಲಿಕ್ ಶಾಲೆ ವಿದ್ಯಾರ್ಥಿ ಶಿವಾನಂದ ಬಿ ಪಾಟೀಲ ಸನ್ಮಾನಿತರ ಪರವಾಗಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳು ಗುರಿಯನ್ನು ತಲುಪಲು ಕಠಿಣ ಪರಿಶ್ರಮ ವೊಂದೇ ಮಾರ್ಗವಾಗಿದೆ ಎಂದರು.

ಪವನ್ ಆಂಗ್ಲ ಮಾಧ್ಯಮ ಶಾಲೆಯ ಅಭಿಷೇಕ ಅಡಕೆ ಮಾತನಾಡಿ ಶಾಲೆಯಲ್ಲಿ ಶಿಕ್ಷಕರ ಪಾಠ ಬೋಧನೆಯೊಂದ ರಿಂದಲೇ ಈ ಸಾಧನೆ ಸಾಧ್ಯವಾಗಿದೆ.ಕಠಿಣ ಪರಿಶ್ರಮವಿ ದ್ದರೆ ಟ್ಯೂಷನ್ ಅಗತ್ಯವಿಲ್ಲ ಎಂದರು.

ರಾಜ್ಯಕ್ಕೆ ಎರಡನೇ ರಾಂಕ್ ಪಡೆದ ಧಾರವಾಡ ಕೆ.ಇ ಬೋರ್ಡ್ ಆಂಗ್ಲ ಮಾಧ್ಯಮ ಶಾಲೆಯ ರಘೋತ್ತಮ ನಾಡಗೌಡರ ,ಶಿರಗುಪ್ಪಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿ ಚೇತನಾ ಮಣಕವಾಡ ಹುಬ್ಬಳ್ಳಿ ಎಸ್‌ಜೆಎಸ್ ಶಾಲೆಯ ದಿವ್ಯಾ ಚವ್ಹಾಣ,
ಮೂರನೇ ರಾಂಕ್ ಪಡೆದ ಹುಬ್ಬಳ್ಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಂಕಲ್ಪ ಕುಂಠೆ,ಧಾರವಾಡ ಕೆ‌.ಇ ಬೋರ್ಡ್ ಆಂಗ್ಲ ಮಾಧ್ಯಮ ಶಾಲೆಯ ಭಾಗ್ಯಶ್ರೀ ಭಾಗವತ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ವಿದ್ಯಾರ್ಥಿಗಳಾದ ಹುಬ್ಬಳ್ಳಿಯ ನಿರ್ಮಲಾ ಟಕ್ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಮೀಷಾ ಕಿನ್ನಿ, ಧಾರವಾಡ ಕೆ.ಇ.ಬೋರ್ಡ್ ಶಾಲೆಯ ಸಿಂಚನಾ ದಾನಗೇರಿ,ಹುಬ್ಬಳ್ಳಿ ಡಾ.ಜಿ.ವಿ.ಜೋಷಿ ಆಂಗ್ಲಮಾಧ್ಯಮ ಶಾಲೆಯ ಮಧುಶ್ರೀ ಶಿವಳ್ಳಿ,ಬೆನಕ ವಿದ್ಯಾಮಂದಿರದ ಸುಚಿತ್ರಾ ಖಾನಣ್ಣವರ, ಕೇಶ್ವಾಪುರ ಕಾನ್ವೆಂಟ್ ಶಾಲೆಯ ಭಾವನಾ ಕಠಾರೆ, ಧಾರವಾಡ ಪ್ರೆಸೆಂಟೇಷನ್ ಬಾಲಕಿಯರ ಶಾಲೆಯ ಸಯೇದಾ ಶರೀಫಾ ಸಿಮ್ರನ್ ಮದನಿ,ಧಾರವಾಡ ಜೆಎಸ್‌ಎಸ್ ಶಾಲೆ ನಿಖಿತಾ ಪಿ.ಉಪ್ಪಾರ ಮತ್ತಿತರನ್ನು ಸನ್ಮಾನಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ)ಎಸ್ ಎಸ್ ಕೆಳದಿಮಠ, ಉಪನಿರ್ದೇಶಕಿ (ಅಭಿವೃದ್ಧಿ) ಎನ್.ಕೆ.ಸಾವ್ಕಾರ್ ವೇದಿಕೆಯಲ್ಲಿ ಇದ್ದರು.

ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು,ವಿದ್ಯಾರ್ಥಿಗಳ ಪಾಲಕರು,ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೂರ್ಣಿಮಾ ಮುಕ್ಕುಂದಿ ಪ್ರಾರ್ಥಿಸಿ,ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ ವಂದಿಸಿದರು‌


Google News

 

 

WhatsApp Group Join Now
Telegram Group Join Now
Suddi Sante Desk