ಭೀಕರ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು – ರಸ್ತೆ ಬದಿ ನಿಂತುಕೊಂಡಿದ್ದ ಕಾರಿಗೆ ಡಿಕ್ಕೆ ಹೊಡೆದ ಬೈಕ್ ಗಾಯಾಳು ಕಿಮ್ಸ್ ಆಸ್ಪತ್ರೆಗೆ ದಾಖಲು…..

Suddi Sante Desk
ಭೀಕರ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು – ರಸ್ತೆ ಬದಿ ನಿಂತುಕೊಂಡಿದ್ದ ಕಾರಿಗೆ ಡಿಕ್ಕೆ ಹೊಡೆದ ಬೈಕ್ ಗಾಯಾಳು ಕಿಮ್ಸ್ ಆಸ್ಪತ್ರೆಗೆ ದಾಖಲು…..

ಕಾರವಾರ

ಭೀಕರ ಅಪಘಾತ ಇಬ್ಬರು ಯುವಕರು ಸ್ಥಳ ದಲ್ಲೇ ಸಾವು – ರಸ್ತೆ ಬದಿ ನಿಂತುಕೊಂಡಿದ್ದ ಕಾರಿಗೆ ಡಿಕ್ಕೆ ಹೊಡೆದ ಬೈಕ್ ಗಾಯಾಳು ಕಿಮ್ಸ್ ಆಸ್ಪತ್ರೆಗೆ ದಾಖಲು…..

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಕಾರಿಗೆ ಬೈಕ್ ವೊಂದು ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಕಾರವಾರ ಜಿಲ್ಲೆಯ ಯಲ್ಲಾಪೂರದಲ್ಲಿ ನಡೆದಿದೆ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿ ಇನ್ನೋರ್ವ ನು ಗಂಭೀರವಾಗಿ ಗಾಯಗೊಂಡಿದ್ದು ಉ.ಕ ಜಿಲ್ಲೆ ಯಲ್ಲಾಪುರ ಪಟ್ಟಣದ ಹೊರವಲಯದಲ್ಲಿ ಈ ಒಂದು ಘಟನೆ ನಡೆದಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಬೈಕ್ ಸವಾರರು.‌ಪಟ್ಟಣದ ಕೆಬಿ ರಸ್ತೆಯ ಶಾನಭಾಗ ಹೋಟೆಲ್‌ ಬಳಿ ನಡೆ ದಿದ್ದು ತಾಲೂಕಿನ ಹುಣಶೆಟ್ಟಿಕೊಪ್ಪದ ದರ್ಶನ, ರಾಮನಕೊಪ್ಪದ ರಾಜು ಭಂಡಾರಿ ಮೃತರಾದವ ರಾಗಿದ್ದಾರೆ.ಮಹ್ಮದ್ ಜಾಬೀರ್‌ ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬೈಕ್‌ ನಲ್ಲಿ ಟ್ರಿಬಲ್‌ ರೈಡಿಂಗ್‌ ಮಾಡುತ್ತಿದ್ದರು ಬೈಕ್ ಸವಾರರು.

ಹೋಟೆಲ್‌ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಇನೋವಾ ಕಾರ್‌ ಗೆ ಹಿಂಭಾಗದಿಂದ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದ ವಿಡಿಯೋ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಯಲ್ಲಾಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.