This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಶಾಲಾ ಮಕ್ಕಳನ್ನು ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ಹೊರಬಿತ್ತು ರಾಜ್ಯ ಸರ್ಕಾರದಿಂದ ಹೊಸದೊಂದು ಆದೇಶ – ಉಲ್ಲಂಘನೆ ಮಾಡಿದರೆ ಜಿಲ್ಲಾ,ತಾಲ್ಲೂಕು ಮಟ್ಟದ ಅಧಿಕಾರಿಗಳು ಶಿಕ್ಷಕರೇ ಜವಾಬ್ದಾರರು ಇಲಾಖೆಯಿಂದ ಖಡಕ್ ಎಚ್ಚರಿಕೆ ಸಂದೇಶ…..

ಶಾಲಾ ಮಕ್ಕಳನ್ನು ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ಹೊರಬಿತ್ತು ರಾಜ್ಯ ಸರ್ಕಾರದಿಂದ ಹೊಸದೊಂದು ಆದೇಶ – ಉಲ್ಲಂಘನೆ ಮಾಡಿದರೆ ಜಿಲ್ಲಾ,ತಾಲ್ಲೂಕು ಮಟ್ಟದ ಅಧಿಕಾರಿಗಳು ಶಿಕ್ಷಕರೇ ಜವಾಬ್ದಾರರು ಇಲಾಖೆಯಿಂದ ಖಡಕ್ ಎಚ್ಚರಿಕೆ ಸಂದೇಶ…..
WhatsApp Group Join Now
Telegram Group Join Now

ಬೆಂಗಳೂರು

ಶಾಲಾ ಮಕ್ಕಳನ್ನು ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ಹೊರಬಿತ್ತು ರಾಜ್ಯ ಸರ್ಕಾರದಿಂದ ಹೊಸದೊಂದು ಆದೇಶ  ಉಲ್ಲಂಘನೆ ಮಾಡಿದರೆ ಜಿಲ್ಲಾ,ತಾಲ್ಲೂಕು ಮಟ್ಟದ ಅಧಿಕಾರಿಗಳು ಶಿಕ್ಷಕರೇ ಜವಾಬ್ದಾರರು ಇಲಾಖೆಯಿಂದ ಖಡಕ್ ಎಚ್ಚರಿಕೆ ಸಂದೇಶ

ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗ ಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಹೊರತುಪಡಿಸಿ ಬೇರೆ ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಂತೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆಯನ್ನು ನೀಡಿದೆ ಇತ್ತೀಚಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲಾ ಕಾಲೇಜು ಅನುದಾನಿತ ಮಕ್ಕಳು ವಿದ್ಯಾರ್ಥಿಗಳನ್ನು ಶೈಕ್ಷ ಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಈ ಒಂದು ವಿಚಾರವನ್ನು ರಾಜ್ಯ ಸರ್ಕಾರ ಇಲಾಖೆ ಸಧ್ಯ ಗಂಭೀರವಾಗಿ ತಗೆದುಕೊಂಡಿದ್ದು ಹೊಸ. ದೊಂದು ಪರಿಷ್ಕ್ರತವಾದ ಆದೇಶವನ್ನು ಮಾಡಿದೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳೊದನ್ನು ನಿಷೇಧಿ ಸಲಾಗಿದೆ.ಶಾಲಾ ಮತ್ತು ಕಾಲೇಜು ಮಕ್ಕಳನ್ನು ಶೈಕ್ಷಣಿಕ ಮತ್ತು ಅದರ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನಿತರೆ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳುವು ದನ್ನು ಇಲಾಖೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ.

ಈ ಒಂದು ವಿಚಾರ ಕುರಿತಂತೆ ಈಗಾಗಲೇ ಈ ಹಿಂದೆ ಅನೇಕ ಸುತ್ತೋಲೆ,ಅದೇಶದ ಮೂಲಕ ಸೂಚಿಸಿದ್ದರು ಕೂಡಾ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಪ್ರತಿಭಟನೆ,ರಾಜಕೀಯ ಪಕ್ಷಗಳ ಸಭೆ, ಸಮಾ ರಂಭ,ಇತ್ಯಾದಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿ ರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿ ಸಿದೆ.

ಅದುದರಿಂದ ಶಾಲಾ ಮತ್ತು ಕಾಲೇಜು ಮಕ್ಕಳನ್ನು ಶೈಕ್ಷಣಿಕ ಚಟುವಟಕೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಟುವಟಿಕೆ ಗಳಿಗೆ ಬಳಸಿಕೊಳ್ಳಲು ಅವಕಾಶ ಮಾಡಿಕೊಡ ಬಾರದು.ಇದರ ಉಲ್ಲಂಘನೆಯಾದಲ್ಲಿ ಸಂಬಂ ಧಪಟ್ಟ ಶಾಲಾ-ಉಲೇಜು ಆಡಳಿತ ಮಂಡಳಿ ಜಿಲ್ಲಾ ಮಟ್ಟದ ತಾಲ್ಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ಶಾಲೆಗಳ ಮುಖ್ಯಶಿಕ್ಷಕರು ಶಿಕ್ಷಕರನ್ನು ಹೋಣೆ ಮಾಡಿ ಅವರ ಮೇಲೆ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೊರಡಿಸುವ ಆದೇಶದಲ್ಲಿ ತಿಳಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk