ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ಎರಡು ವಿಚಾರ ದಲ್ಲಿ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.ಹೌದು ಸೆಪ್ಟೆಂಬರ್ 6 ರಂದು ಉತ್ತಮವಾಗಿ ಸೇವೆ ಸಲ್ಲಿಸಿದ ರಾಜ್ಯದ 30 ಅಧಿಕಾರಿ ಗಳಿಗೆ ಮತ್ತು ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು ಈ ಒಂದು ಕಾರ್ಯಕ್ರಮ ದಲ್ಲಿ ರಾಜ್ಯದ ಮುಖ್ಯಮಂತ್ರಿ ಪಾಲ್ಗೊಂಡು ರಾಜ್ಯದ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆ ಗಳನ್ನು ಘೋಷಣೆ ಮಾಡುವ ಭರವಸೆ ಇದೆ ಎಂದು ಷಡಾಕ್ಷರಿ ಅವರು ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಾಮಾಜಿಕ ಜಾಲ ತಾಣಗಳಲ್ಲಿ ಈ ಒಂದು ವಿಚಾರ ಕುರಿತು ಸ್ಪಷ್ಟವಾದ ಮಾಹಿತಿಯನ್ನು ನೀಡಿದರು.ಕ್ಯಾಶ್ ಲೇಸ್ ಸೇವೆಯ ಕುರಿತು ಮತ್ತು ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಸಮಿತಿ ರಚಿಸಿ ವರದಿ ಬಂದ ಕೂಡಲೇ ಇದನ್ನು ಜನವರಿ ತಿಂಗಳ ಒಳಗಾಗಿ ನೀಡುವ ಕುರಿತು ಘೋಷಣೆ ಮಾಡಲಿ ದ್ದಾರೆ ಎಂದು ಷಡಾಕ್ಷರಿ ಅವರು ಹೇಳಿದರು
ಇದರೊಂದಿಗೆ ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಹೊಸ ಭರವಸೆಯನ್ನು ಷಡಾಕ್ಷರಿ ಅವರು ನೀಡಿದ್ದು ಈ ಒಂದು ವಿಶ್ವಾಸದಲ್ಲಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಇದ್ದಾರೆ.