ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಈ ಕೂಡಲೇ ಈ ಕೆಲಸ ಮಾಡಿ ನಿರ್ದೇಶಕರ ಮಾಹಿತಿ…..

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಈ ಕೂಡಲೇ ಈ ಕೆಲಸ ಮಾಡಿ ನಿರ್ದೇಶಕರ ಮಾಹಿತಿ…..

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ  ಈ ಕೂಡಲೇ ಈ ಕೆಲಸ ಮಾಡಿ ನಿರ್ದೇಶಕರ ಮಾಹಿತಿ ಹೌದು ರಾಜ್ಯದ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ವಿಚಾರ ಕುರಿ ತಂತೆ ಮಹತ್ವದ ಪ್ರಕಟಣೆಯೊಂದನ್ನು ನೀಡಲಾಗಿದೆ

ಹೌದು ನಗದು ರಹಿತ ಚಿಕಿತ್ಸಾ ಸೌಲಭ್ಯಕ್ಕಾಗಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾ ಯಿಸಿಕೊಳ್ಳಲು

ಹೆಚ್.ಆರ್.ಎಂ.ಎಸ್,1.0 ತಂತ್ರಾಂಶದಲ್ಲಿ(ವೆಬ್ ಅಪ್ಲಿಕೇಷನ್) https://hrms.karnataka.gov.in ಯುಆರ್ ಎಲ್ ಮೂಲಕ ಹಾಗೂ ಮೊಬೈಲ್ ಅಪ್ಲಿಕೇಷನ್ ನಲ್ಲಿ https://hrmsenroll.karnataka.gov.in ಯುಆರ್ ಎಲ್ ಮೂಲಕ ನೊಂದಾಯಿಸಿಕೊ ಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.ವೈದ್ಯಕೀಯ ಹಾಜರಾತಿ ನಿಯಮಗಳನ್ವಯ ಬಟವಾಡೆ ಅಧಿ ಕಾರಿಗಳು ಪ್ರತಿ ಫಲಾನುಭವಿಗಳ ದತ್ತಾಂಶವನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಅನುಮೋದಿಸಬೇ ಕಾಗಿರುತ್ತದೆ.

ನಂತರ ಚಿಕಿತ್ಸೆ ಪಡೆಯಲು ಅರ್ಹತೆ ಹೊಂದು ತ್ತಾರೆ.ಇದುವರೆಗೂ ಒಟ್ಟು 39,264 ಸದಸ್ಯರು ಅರ್ಜಿಗಳನ್ನು ಸಲ್ಲಿಸಿದ್ದಾರೆ, 11,194 ಸದಸ್ಯರ ಅರ್ಜಿಗಳು ಬಟವಾಡೆ ಅಧಿಕಾರಿಗಳಿಂದ ಅನು ಮೋದನೆಯಾಗಿದೆ.ಈ ಯೋಜನೆಗೆ ಒಳಪಡುವ ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಆವ ಲಂಬಿತ ಕುಟಂಬ ಸದಸ್ಯರು ಮಾನವ ಸಂಪ ನ್ಮೂಲ

ನಿರ್ವಹಣಾ ವ್ಯವಸ್ಥೆ(HRMS)ತಂತ್ರಾಂಶದಲ್ಲಿ ಮಾಹಿತಿಯನ್ನು ಇಂಧೀಕರಿಸುವಂತೆ ಬೆಂಗ ಳೂರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.