ರಾಜ್ಯದಲ್ಲಿ ಮತ್ತೊಂದು ಅಪಘಾತ ಗಂಭೀರವಾಗಿ ಗಾಯಗೊಂಡ ಶಿಕ್ಷಕ – ಸಾವು ಬದುಕಿನ ನಡುವೆ ಹೋರಾಟ ದಲ್ಲಿ ಶಿಕ್ಷಕ ಮಹೇಶ್ ಕಿತ್ತೂರ…..

Suddi Sante Desk

ಮುದ್ದೇಬಿಹಾಳ

ಹೌದು ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯ ಕೋಮಲ್ ಡಾಬಾ ಹತ್ತಿರ ಬೈಕ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಲ್ಲಿನ ವಿವಿವ ಸಂಘದ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಮಹೇಶ ಕಿತ್ತೂರ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ‌.

ಅಪಘಾತ ಸಂಭವಿಸಿದ ಕೂಡಲೇ ಪ್ರಜ್ಞೆ ತಪ್ಪಿದ್ದ ಅವರನ್ನು ಬಾಗಲಕೋಟೆಯ ಡಾ.ಕಟ್ಡಿ ಅವರ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾ ಗುತ್ತಿದೆ.ಕಿತ್ತೂರ ಅವರ ತಲೆಗೆ ಗಂಭೀರ ಗಾಯವಾಗಿದ್ದು ಕೈ ಮತ್ತು ತೊಡೆಯ ಮೂಳೆ ಮುರಿದಿದೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಮುದ್ದೇಬಿಹಾಳ ಪೊಲೀಸರು ಮಾಹಿತಿಯನ್ನು ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಕಿತ್ತೂರ ಅವರು ಶರಣರ ವಚನಗಳ ವಿಶ್ಲೇಷಕರಾಗಿದ್ದು ಇದುವರೆಗೆ ಅಂದಾಜು 2800 ವಚನಗಳ ವಿಶ್ಲೇಷಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.