ಧಾರವಾಡ ದಲ್ಲಿ ಉದ್ಯಮಿ ಅಪಹರಣ – ನಾಲ್ಕೇ ಗಂಟೆಯಲ್ಲಿ ಪ್ರಕರಣ ಪತ್ತೆ ಮಾಡಿ ಸುಖಾಂತ್ಯ ಮಾಡಿದ ಪೊಲೀಸರು…..

Suddi Sante Desk

ಧಾರವಾಡ –

ಉದ್ಯಮಿಯೊಬ್ಬರನ್ನು ಅಪಹರಣ ಮಾಡಿ ನಾಲ್ಕು ಗಂಟೆಯಲ್ಲೇ ಪೊಲೀಸರು ಅದನ್ನು ಪತ್ತೆ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು ರಿಯಲ್ ಎಸ್ಟೇಟ್‌ ಉದ್ಯಮಿಯೊಬ್ಬರ ಅಪಹರಣವಾಗಿದ್ದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ರೋಚಕ ಕಾರ್ಯಾಚರಣೆ ನಡೆದಿದ್ದು ಪ್ರಕರಣವನ್ನು ಸುಖಾಂತ್ಯವಾಗಿಸುವಲ್ಲಿ ಪೊಲೀಸರು ಯಶಸ್ವಿಯಾ ಗಿದ್ದಾರೆ.

ಧಾರವಾಡದ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ ನಾಯ್ಡು ಎಂಬವರೇ ಅಪಹೃತರಾದ ವರಾಗಿದ್ದು ಇವರು ತಮ್ಮ ಅಳಿಯನೊಂದಿಗೆ ಜಮೀನು ನೋಡಲು ಹೋಗಿದ್ದಾಗ ದಾಳಿ ನಡೆಸಿದ್ದ ದುಷ್ಕರ್ಮಿಗಳು ಅಳಿಯನ ಮೇಲೆ ಹಲ್ಲೆ ನಡೆಸಿ ಶ್ರೀನಿವಾಸ ನಾಯ್ಡು ಅವರನ್ನು ಅಪಹರಿಸಿದ್ದರು.

ಈ ಒಂದು ಅಪಹರಣದ ಬಗ್ಗೆ ಅಳಿಯ ದೂರು ನೀಡುತ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು ಅಪಹರಣ ನಡೆದ ನಾಲ್ಕೇ ಗಂಟೆಗಳಲ್ಲಿ ಉದ್ಯಮಿ ಯನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ.ಅಪಹರಣಕಾರರು ಉದ್ಯಮಿಯನ್ನು ಧಾರವಾಡ ಹೊರವಲಯದ ದೇವರ ಹುಬ್ಬಳ್ಳಿಯ ಶೆಡ್ ಒಂದರಲ್ಲಿ ಕೂಡಿ ಹಾಕಿ ದ್ದರು.ಪೊಲೀಸರು ಅಲ್ಲಿಗೆ ತೆರಳುತ್ತಿದ್ದಂತೆ ಅಪಹರ ಣಕಾರರು ಪರಾರಿಯಾಗಿದ್ದಾರೆ.ಪೊಲೀಸರು ಉದ್ಯಮಿಯನ್ನು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದು ಅಲ್ಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿಯಾಗಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.