This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

ಉಡುಪಿ

ಮಾರ್ಚ್ ನಲ್ಲಿ ಯೇ 7ನೇ ವೇತನ ಆಯೋಗ ಜಾರಿಗೆ ಷಡಾಕ್ಷರಿ ಅವರಿಂದ ಮಾಹಿತಿ 7ನೇ ವೇತನ ಆಯೋಗ ಯಾವಾಗ ಎನ್ನುತ್ತಿದ್ದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯಾಧ್ಯಕ್ಷರು

ಮಾರ್ಚ್ ನಲ್ಲಿ ಯೇ 7ನೇ ವೇತನ ಆಯೋಗ ಜಾರಿಗೆ ಷಡಾಕ್ಷರಿ ಅವರಿಂದ ಮಾಹಿತಿ 7ನೇ ವೇತನ ಆಯೋಗ ಯಾವಾಗ ಎನ್ನುತ್ತಿದ್ದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯಾಧ್ಯಕ್ಷರು
WhatsApp Group Join Now
Telegram Group Join Now

ಉಡುಪಿ

ರಾಜ್ಯದ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳಲ್ಲಿ  7ನೇ ವೇತನ ಆಯೋಗ ಜಾರಿಗೆ ಮಾಡಲಾಗುತ್ತದೆ ಎಂದು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೇಳಿದರು.ಉಡುಪಿ ಯಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿ ಯೊಂದಿಗೆ ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದರು

ಮಾರ್ಚ್‌ನಲ್ಲಿ ಹೊಸ ವೇತನ ಆಯೋಗ ಜಾರಿಗೆ ಬಂದ ನಂತರ ಎನ್‌ಪಿಎಸ್ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕುರಿತಂತೆ ಕ್ರಮ ಕೈಗೊ ಳ್ಳಲಾಗುವುದು ಎಂದರು.ಮಣಿಪಾಲದ ರಜತಾ ದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂ ಗಣ ದಲ್ಲಿ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ 2022ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

 

ಜಿಲ್ಲೆಯಲ್ಲಿ 7500ಕ್ಕೂ ಅಧಿಕ ಸರಕಾರಿ ನೌಕರರಿದ್ದು, ಜಿಲ್ಲಾ ಸರಕಾರಿ ನೌಕರರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ನೀಡುವಲ್ಲಿ ಸರ್ಕಾರದ ಮಟ್ಟದಲ್ಲಿ ವಿಶೇಷವಾಗಿ ಪ್ರಯತ್ನಿಸುವುದಾಗಿ ತಿಳಿಸಿದ ಶಾಸಕರು, ಸರಕಾರಿ ನೌಕರರ ಪ್ರತಿಭಾವಂತ ಮಕ್ಕಳು ಅಖಿಲ ಭಾರತ ಮತ್ತು ಕರ್ನಾಟಕ ಆಡಳಿತ ಸೇವೆಯಲ್ಲಿ ಸೇರ್ಪಡೆಗೊಳ್ಳಬೇಕು. ಈ ಬಗ್ಗೆ ನೌಕರರು ತಮ್ಮ ಮಕ್ಕಳನ್ನು ಪ್ರೇರೇಪಿಸಬೆಕು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮಾತ ನಾಡಿ ನೌಕರರು ತಮ್ಮ ಕರ್ತವ್ಯದ ಜೊತೆಗೆ ಮಕ್ಕಳಿಗೆ ಅಗತ್ಯ ಸಮಯ ಮೀಸಲಿಡಬೇಕು. ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸ ಬೇಕು ಎಂದರು.ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸಂಘದ ಉಪಾಧ್ಯಕ್ಷ ಮೋಹನ್‌ಕುಮಾರ  ಜಿಲ್ಲಾ ಸಂಘದ ಖಜಾಂಜಿ ಶರೀಫ್ ರೋಣ,ಹೆಬ್ರಿ ತಾಲೂಕು ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಹರೀಶ್ ಪೂಜಾರಿ,ಕಾರ್ಕಳದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ,ಮಾಜಿ ಅಧ್ಯಕ್ಷ ಸುಬ್ರ ಹ್ಮಣ್ಯ ಶೇರಿಗಾರ್,ಹಾಗೂ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಉಡುಪಿ…..


Google News

 

 

WhatsApp Group Join Now
Telegram Group Join Now
Suddi Sante Desk