ರಾಜ್ಯ ಸರ್ಕಾರಿ ನೌಕರರ ಮತ್ತೊಂದು ಐತಿಹಾಸಿಕ ಸಮಾವೇಶಕ್ಕೆ ಸಿದ್ದತೆ – ಸಮಾವೇಶದ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಿದ್ದಾರೆ ನೌಕರರು…..

Suddi Sante Desk
ರಾಜ್ಯ ಸರ್ಕಾರಿ ನೌಕರರ ಮತ್ತೊಂದು ಐತಿಹಾಸಿಕ ಸಮಾವೇಶಕ್ಕೆ ಸಿದ್ದತೆ – ಸಮಾವೇಶದ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಿದ್ದಾರೆ ನೌಕರರು…..

ಬೆಂಗಳೂರು

ಕರ್ನಾಟಕದ ಸರ್ಕಾರಿ ನೌಕರರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಫೆಬ್ರವರಿ 20ರಂದು ಸರ್ಕಾರಿ ನೌಕರರ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೌಕರರು ಒತ್ತಾಯಿಸ ಲಿದ್ದಾರೆ

ಸಮಾವೇಶದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿ ನೀಡಿದೆ20/02/2025ರಂದು ತ್ರಿಪುರವಾಸಿನಿ, ಬೆಂಗಳೂರು ಅರಮನೆ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ‘ಸಮಾವೇಶ ಹಾಗೂ ಕಾರ್ಯಾಗಾರ’ ನಡೆಯಲಿದೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ 20ರ ಗುರುವಾರ ಬೆಳಗ್ಗೆ 11.45ಕ್ಕೆ ತ್ರಿಪುರವಾಸಿನಿ, ಅರಮನೆ ಆವರಣ, ಮೇಖ್ರಿ ವೃತ್ತದ ಹತ್ತಿರ ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೆಶಕರ-ಪದಾಧಿಕಾರಿಗಳ ‘ಸಮಾವೇಶ’ ಹಾಗೂ ‘ಕಾರ್ಯಾಗಾರ ನಡೆಯಲಿದೆ

ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸ ಲಿದ್ದು ಉಪ ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು ಶಾಖೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.