ತುಮಕೂರು –
ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ ಕೆಲವರು ಗಲಾಟೆ ಮಾಡಿರುವ ಘಟನೆ ತುಮಕೂರು ನಗರದ ಹೊರವಲಯ ಭೀಮಸಂದ್ರದಲ್ಲಿ ನಡೆದಿದ್ದು ಮುಸ್ಲಿಂ ಸಮುದಾಯದ ಶಿಕ್ಷಕಿ ಎಂಬ ಕಾರಣಕ್ಕೆ ಸಮೀಕ್ಷೆಗೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ
ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ ಬಳಿ ಬಂದಿದ್ದೀ ಯಾ? ಸಮೀಕ್ಷೆ ಮಾಡಲು ನೀರು ಯಾರು? ಮುಸ್ಲಿಮರ ಮನೆ ಹತ್ತಿರ ಬಿಟ್ಟುಕೊಳ್ಳಬಾರದು. ಮನೆ ಬಳಿಗೆ ಏಕೆ ಬರುತ್ತೀರಾ? ಸಮೀಕ್ಷೆಗೆ ಬರುವಾಗ ಗುರುತಿನ ಕಾರ್ಡ್ ಏಕೆ ತಂದಿಲ್ಲ?’ ಎಂದೆಲ್ಲ ಪ್ರಶ್ನಿಸಲಾಗಿದೆ.ನಮ್ಮ ಮನೆ ಸಮೀಪದಲ್ಲೇ ಇದ್ದು, ಐ.ಡಿ ಕಾರ್ಡ್ ತರುತ್ತೇನೆ. ಸಮೀಕ್ಷೆಗೆ ಅವಕಾಶ ಮಾಡಿಕೊಡಿ’ ಎಂದು ಶಿಕ್ಷಕಿ ಮನವಿ ಮಾಡುತ್ತಿರುವುದು ವಿಡಿಯೊದಲ್ಲಿ ಇದೆ.
ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿ ದೂರು ನೀಡಿದ್ದಾರೆ. ಈ ಕುರಿತು ಮಾಹಿತಿ ಪಡೆಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ತುಮಕೂರು…..