This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಸ್ವಾತಂತ್ರ್ಯಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ BEO ಎಡವಟ್ಟು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ…..

WhatsApp Group Join Now
Telegram Group Join Now

ತೀರ್ಥಹಳ್ಳಿ –

ಹೌದು ಸಧ್ಯ ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸು ತ್ತಿದ್ದು ಇಂದಿನಿಂದ ಆಗಸ್ಟ್ 15 ರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸಲಾಗುತ್ತಿದೆ ದೇಶಪ್ರೇಮಿ ಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ಗೌರವ ವಂದನೆ ನೀಡಿ ಹಬ್ಬದ ರೀತಿಯಲ್ಲಿ ಆಚ ರಣೆ ಮಾಡುತ್ತಾ ಇರುವಾಗ ಇತ್ತ ಶಿಕ್ಷಣಾಧಿಕಾರಿಗಳು ನಾಮಕ ಅವಸ್ಥೆಯಿಂದ ಬೇಜವಾಬ್ದಾರಿಯಾಗಿ ರಾಷ್ಟ್ರದ ದ್ವಜ ಹಾರಿಸಿದ ದೃಶ್ಯ ಪಟ್ಟಣ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಕಂಡು ಬಂದಿದೆ.

ಹೌದು ಮಕ್ಕಳಿಗೆ ತಿಳಿ ಹೇಳುವ ಇಲಾಖೆಯ ಅಧಿಕಾರಿ ಗಳು ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತಿದೆ.ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡ ವಟ್ಟು ಎದ್ದು ಕಾಣಿಸುತ್ತಿದೆ ರಾಜ್ಯ ಸರ್ಕಾರದ ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿಯ ಶಿಕ್ಷಣ ಇಲಾಖೆಯಲ್ಲಿ ತಮ್ಮ ಕಚೇರಿಯಲ್ಲಿ ಕಬ್ಬಿಣದ ಸಲಾಕೆ ಒಂದಕ್ಕೆ ತ್ರಿವರ್ಣ ಧ್ವಜ ವನ್ನು ಕಟ್ಟಿದ್ದಲ್ಲದೆ ವ್ಯಕ್ತಿಯ ಎದೆ ಭಾಗಕ್ಕಿಂತ ಎತ್ತರಕ್ಕೆ ಧ್ವಜಾರೋಹಣವನ್ನು ನೆರವೇರಿಸಬೇಕಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ವ್ಯಕ್ತಿಯ ಎದೆಯ ಭಾಗಕ್ಕಿಂತಲೂ ಕೇಳಭಾಗದಲ್ಲಿ ಧ್ವಜಾರೋಹಣ ಮಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ.

ತೀರ್ಥಹಳ್ಳಿ ಶಿಕ್ಷಣಾಧಿಕಾರಿ ಆನಂದ್ ಕುಮಾರ್ ಈ ಸಾಮಾನ್ಯ ಜ್ಞಾನವೂ ಇಲ್ಲದೆ ಬೇಕಾಬಿಟ್ಟಿ ಧ್ವಜಾರೋಹಣ ನೆರವೇರಿಸಿದ್ದು ಜಿಲ್ಲಾಧಿಕಾರಿಗಳು ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ ಇದೇಲ್ಲವನ್ನು ನೋಡಿದರೆ ಇದನ್ನೇ ಹೀಗೆ ಮಾಡಿರುವ ಇವರು ಇಲಾಖೆಯಲ್ಲಿ ಇನ್ನೇನು ಇವರಿಂದ ಅಭಿವೃದ್ದಿ ಸಾಧ್ಯ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk