This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಕಾರ್ಖಾನೆ ನೌಕರರು, ಬ್ಯಾಂಕ್ ಸಿಬ್ಬಂದಿ – ಚುನಾವಣೆ ಸಮಯ ದಲ್ಲಿ ಎಡವಟ್ಟು ಬಯಲು…..

WhatsApp Group Join Now
Telegram Group Join Now

ಬಾಗಲಕೋಟೆ –

ಪ್ರಸ್ತುತ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಮತದಾರರ ಪಟ್ಟಿಯಲ್ಲಿ ಕಾರ್ಖಾನೆ ನೌಕರರು,ಬ್ಯಾಂಕ್‌ ಸಿಬ್ಬಂದಿ ಹೆಸರು ಸೇರಿಸ ಲಾಗಿದೆ ಈ ಕುರಿತು ಸಮಗ್ರ ದಾಖಲೆ ಕಲೆ ಹಾಕುತ್ತಿದ್ದು, ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಅತಿಥಿ ಉಪನ್ಯಾಸಕರೂ ಆಗಿರುವ ಪಕ್ಷೇತರ ಅಭ್ಯರ್ಥಿ ಬಸಪ್ಪ ಮನಿಗಾರ ಹೇಳಿದರು.ಬಾಗಲಕೋಟಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ನಾನು ಕಳೆದ 12 ವರ್ಷಗ ಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ಅತಿಥಿ ಉಪ ನ್ಯಾಸಕರು,ಈ ಬಾರಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧಿಸಲು ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿ ದ್ದಾರೆ.ಹೀಗಾಗಿ ಮೂರು ಜಿಲ್ಲೆಗಳ ಶಿಕ್ಷಕರು,ಅತಿಥಿ ಉಪನ್ಯಾಸಕರು,ಮತದಾರರು ನನಗೆ ಮತ ನೀಡಿ ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು

ಈ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿರುವ ಅರುಣ ಶಹಾಪುರ ಅವರು ಆಡಳಿತ ದುರುಪಯೋಗಪಡಿಸಿ ಕೊಂಡು ಮತದಾರರ ಪಟ್ಟಿ ಅಕ್ರಮವಾಗಿ ರಚಿಸಲು ಕಾರಣರಾಗಿದ್ದಾರೆ.ಸುಮಾರು 3 ಸಾವಿರಕ್ಕೂ ಹೆಚ್ಚು ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ.ನಾನು ಕಾರ್ಯ ನಿರ್ವಹಿಸುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ ಎಂಬ ದಾಖಲೆ ಸಲ್ಲಿಸಿ 7 ಜನರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾ ಗಿದೆ.ಅವರೆಲ್ಲ ವಾಸ್ತವದಲ್ಲಿ ಶಿಕ್ಷಕರೇ ಆಗಿಲ್ಲ.ಕಾರ್ಖಾನೆ, ಬ್ಯಾಂಕ್‌ ನೌಕರರಾಗಿದ್ದಾರೆ.ಹೀಗೆಯೇ ಮೂರೂ ಜಿಲ್ಲೆಗಳ ಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದವರ ದಾಖಲೆ ಸಂಗ್ರಹಿಸಲಾಗುತ್ತಿದೆ ಎಂದರು.

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದವರು ಮತ್ತು ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು.ಅಲ್ಲದೇ ಮತದಾನದ ದಿನ ಅವರು ಮತ ಚಲಾಯಿಸುವ ಕುರಿತೂ ವಿಡಿಯೋ ಮಾಡಿ, ಅದನ್ನು ಚುನಾವಣೆ ಆಯೋಗ ಹಾಗೂ ಪ್ರಕರಣದ ಜತೆಗೆ ದಾಖಲೆ ನೀಡಲಾಗುವುದು ಎಂದು ಹೇಳಿದರು.

ಈ ಕ್ಷೇತ್ರ ಪ್ರತಿನಿಧಿಸಿದ ವ್ಯಕ್ತಿಗಳು ಶಿಕ್ಷಕರ,ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಕೆಲಸ ಮಾಡಿಲ್ಲ.ಅಲ್ಲದೇ ರಾಜ್ಯದಲ್ಲಿದ್ದ 14 ಸಾವಿರ ಅತಿಥಿ ಉಪನ್ಯಾಸಕರಲ್ಲಿ ಸುಮಾರು 7 ಸಾವಿರ ಅತಿಥಿ ಉಪನ್ಯಾ ಸಕರನ್ನು ಮನೆಗೆ ಕಳುಹಿಸಿ ಅವರ ಬದುಕೇ ಹಾಳು ಮಾಡಿದ ಅಪಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ.ಈ 7 ಸಾವಿರ ಅತಿಥಿ ಉಪನ್ಯಾಸಕರ ಶಾಪ,ಬಿಜೆಪಿ ಸರ್ಕಾರಕ್ಕೆ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೈಕ್ಷಣಿಕ ಕ್ಷೇತ್ರದ ಸುಧಾರಣೆ, ಶಿಕ್ಷಕರು,ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನನ್ನದೇ ಆದ ಪ್ರಣಾಳಿಕೆ ಹಾಕಿಕೊಂಡಿದ್ದೇನೆ.ಆ ನಿಟ್ಟಿನಲ್ಲಿ ನಾನು ಕಾರ್ಯ ನಿರ್ವಹಿಸುವೆ.ಮೂರು ಜಿಲ್ಲೆಗಳ ಮತದಾರರು ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಅತಿಥಿ ಉಪನ್ಯಾಸಕರಾದ ವಿಜಯಕುಮಾರ ಕಂದಗಲ್‌, ಭೀಮಪ್ಪ ಇಟಕನ್ನವರ, ಮೊಹ್ಮದ ಆಸಿಫ್‌ ಪಡೇಕನೂರ, ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk