ವಾರ್ಡ್ 69 ರಲ್ಲಿ ಈ ಬಾರಿ ನಿವೇ ಎನ್ನುತ್ತಿದ್ದಾರೆ ಮತದಾರರು – ಶ್ರೀಮತಿ ಕಮಲಾ ಶ್ರೀನಿವಾಸ ಬೆಳದಡಿ ಅವರೇ ಈ ಬಾರಿ ನಿಶ್ಚಿತ ಮತದಾರರ ಮಾತು…..

Suddi Sante Desk

ಹುಬ್ಬಳ್ಳಿ –

ಬದಲಾವಣೆ ಬಯಸಿ ಹೊಸ ಕನಸಿನೊಂದಿಗೆ ಏನಾದರೂ ಮಾಡಿ ವಾರ್ಡ್ ನ್ನು ಅಭಿವೃದ್ದಿ ಮಾಡಬೇಕು ಮತದಾರರ ಸೇವೆಯೆ ನನ್ನ ಗುರಿ ನನ್ನ ಉದ್ದೇಶ.ಸ್ಥಳೀಯವಾಗಿ ನಮ್ಮ ಪಕ್ಷದವರೇ ಶಾಸಕರು

ಹೀಗಾಗಿ ಈ ಬಾರಿ ವಾರ್ಡ್ ನಲ್ಲಿ ನಾನು ಗೆದ್ದು ಬಂದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ದಿ ಮಾಡಬಹುದು ಜೊತೆಯಲ್ಲಿ ಪಾಲಿಕೆ ಯಲ್ಲೂ ನಾವೇ ಅಧಿಕಾರವನ್ನು ಹಿಡಿಯೊದು ಹೀಗೆ ಎಂದು ಕೊಂಡು ಧಾರವಾಡದ ವಾರ್ಡ್ 69 ರಲ್ಲಿ ಕಾಂಗ್ರೇಸ್ ಪಕ್ಷದಿಂದ ಶ್ರೀಮತಿ ಕಮಲಾ ಶ್ರೀನಿವಾಸ ಬೆಳದಡಿ ಸ್ಪರ್ಧೆ ಮಾಡಿದ್ದಾರೆ.

ಕಳೆದ 20 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ದ್ದುಕೊಂಡು ಸಾಕಷ್ಚು ಪ್ರಮಾಣದಲ್ಲಿ ಸಂಘಟನೆ ಮಾಡುತ್ತಾ ಪಕ್ಷ ವಹಿಸಿಕೊಟ್ಟ ಸೂಚನೆ ನೀಡಿದ ಯಾವುದಾದರೂ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಮಾಡುತ್ತಾ ವಾರ್ಡ್ ನಲ್ಲಿ ಈಗಾಗಲೇ ಜನಪ್ರೀಯವಾಗಿದ್ದಾರೆ ಶ್ರೀಮತಿ ಕಮಲಾ ಶ್ರೀನಿವಾಸ ದಂಪತಿಗಳು

ಇನ್ನೂ ಪಕ್ಷದಿಂದ ಟಿಕೇಟ್ ಘೋಷಣೆಯಾಗುತ್ತಿ ದ್ದಂತೆ ಚುನಾವಣಾ ಅಖಾಡಕ್ಕೆ ಇಳಿದಿರುವ ಇವರು ಈಗಾಗಲೇ ಪಕ್ಷದಲ್ಲಿದ್ದುಕೊಂಡು ಜನಪ್ರೀಯ ಶಾಸಕ ಪ್ರಸಾದ ಅಬ್ಬಯ್ಯ ಅವರೊಂದಿಗೆ ಕೈ ಜೊಡಿಸಿ ಕೋಟ್ಯಾಂತರ ರೂಪಾಯಿ ಅನುದಾನ ವನ್ನು ವಾರ್ಡ್ ಗೆ ಹಾಕಿ

ವಾರ್ಡ್ ನಲ್ಲಿ ಪ್ರಮುಖ ರಸ್ತೆ,ಚರಂಡಿ ಸಮುದಾಯ ಭವನ,ಸಾರ್ಜಜನಿಕರಿಗೆ ಅನುಕೂಲ ಆಗಲೆಂಬ ಕಾರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರ ಆರಂಭ ಮಾಡಿದ್ದಾರೆ. ಇದರೊಂದಿಗೆ ಸಾಲದಂತೆ ಶಾಸಕರಿಂದ ಸಾಕಷ್ಟು ಜನರ ಸೇವೆಯನ್ನು ಅಧಿಕಾರ ಬರುವ ಮುನ್ನವೇ ಮಾಡಿ

ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡಿರುವ ಇವರ ಸ್ಪರ್ಧೆಯಿಂದ ವಾರ್ಡ್ ನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸ್ಪಂದನೆ ಸಿಗುತ್ತಿದೆ.ವಾರ್ಡ್ ಬದಲಾ ವಣೆಯಾದರೂ ಕೂಡಾ ಹೊಸ ಕನಸು ಹೊಸ ಉತ್ಸಾಹದೊಂದಿಗೆ ಕಣಕ್ಕಿಳಿದಿರುವ ಇವರಿಗೆ ಉತ್ತಮ ಸ್ಪಂದನೆ ಸಿಗುತ್ತಿದೆ.

ಪ್ರಚಾರಕ್ಕೆ ಹೋದಲ್ಲೆಲ್ಲ ಒಳ್ಳೇಯ ಭರವಸೆಯ ಮಾತುಗಳು ಉತ್ಸಾಹದ ಗೆಲುವಿನ ಆಸೆಯ ಮಾತು ಗಳನ್ನು ವಾರ್ಡ್ ನ ಜನರು ಹೇಳುತ್ತಿದ್ದಾರೆ. ಪ್ರಚಾರ ಕ್ಕೆ ಹೋದಲೆಲ್ಲ ನಮಗೂ ನಿಮ್ಮಂಥವರೇ ಬೇಕಾ ಗಿದೆ ಬದಲಾವಣೆ ಬೇಕಾಗಿದೆ ನಮಗೆ ನೀವು ಬಂದಿದ್ದು ತುಂಬಾ ತುಂಬಾ ಅನುಕೂಲ ಯಾವುದೇ ಕಾರಣಕ್ಕೂ ನಿಮ್ಮೊಂದಿಗೆ ನಾವಿದ್ದೇವೆ ನೀವು ಬಂದರೆ ನಮಗೂ ಅನುಕೂಲ ನಿಮ್ಮಂಥ ಸರಳ ಸಜ್ಜನಿಕೆಯ ನಾಯಕರೇ ನಮ್ಮ ವಾರ್ಡ್ ಗೆ ಬೇಕು ಎನ್ನುತ್ತಿದ್ದಾರೆ.

ಇದೇ ಉತ್ಸಾಹದಲ್ಲಿ ಶ್ರೀಮತಿ ಕಮಲಾ ಶ್ರೀನಿವಾಸ ಬೆಳದಡಿ ಅವರು ಪ್ರಚಾರವನ್ನು ಮಾಡುತ್ತಿದ್ದಾರೆ. ಇಂದು ಕೂಡಾ ವಾರ್ಡ್ ನ ಹಲವೆಡೆ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರವನ್ನು ಮಾಡಿದರು

ಹಲವೆಡೆ ಅಬ್ಬರದ ಪ್ರಚಾರವನ್ನು ಮಾಡಿ ಮತ ಯಾಚನೆ ಮಾಡಿದರು.ಪಾದಯಾತ್ರೆಯ ಮೂಲಕ ತೆರಳಿ ಪ್ರಚಾರ ಮಾಡುತ್ತಾ ಮತಯಾಚನೆ ಮಾಡಿ ಇದೊಂದು ಬಾರಿ ಅವಕಾಶವನ್ನು ನೀಡುವಂತೆ ಮತದಾರರಲ್ಲಿ ಕೇಳಿಕೊಂಡರು. ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಕಮಲಾ ಶ್ರೀನಿವಾಸ ಬೆಳದಡಿ ಇವರೊಂದಿಗೆ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಆಪ್ತರು ಅಭಿಮಾನಿಗಳು ಸೇರಿ ದಂತೆ ಹಲವರು ಪಾಲ್ಗೊಂಡು ಮನೆ ಮನೆಗೆ ತೆರಳಿ ಮತಯಾಚನೆಯನ್ನು ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.