ಇನ್ಸ್ಪೆಕರ್ ಕರಿಯಪ್ಪ ಬನ್ನಿ ಅಮಾನತು – ಸಂಘ ಪರಿವಾರ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಅಮಾನತು ಮಾಡಿದ ಎಸ್ಪಿ

Suddi Sante Desk
ಇನ್ಸ್ಪೆಕರ್ ಕರಿಯಪ್ಪ ಬನ್ನಿ ಅಮಾನತು  – ಸಂಘ ಪರಿವಾರ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಅಮಾನತು ಮಾಡಿದ ಎಸ್ಪಿ

ಬಾಗಲಕೋಟೆ

 

ಸಂಘ ಪರಿವಾರ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ಬದಾಮಿ ಪೊಲೀಸ್ ಠಾಣೆ ಇನ್ಸ್ಪೇಕ್ಟರ್ ಕರಿಯಪ್ಪ ಬನ್ನಿ ಅವರನ್ನು ಅಮಾನತು ಮಾಡಲಾಗಿದೆ.

 

ಹೌದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಅವರು ಇಲಾಖೆ ವಿಚಾರಣೆ ಬಾಕಿ ಇಟ್ಟು ಅಮಾನತು ಮಾಡಿ ಆದೇಶಿಸಿದ್ದಾರೆ. ಕೇಂದ್ರಸ್ಥಾನ ಬಿಡಬಾರದು ಒಂದು ವೇಳೆ ಕೇಂದ್ರಸ್ಥಾನ ಬಿಡುವುದಾದರೆ ಅನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.ಇನ್ನೂ ಸೆಪ್ಟಂಬರ್ 6 ರಂದು ಕೆರೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಸಿಪಿಐ ಕರಿಯಪ್ಪ ಬನ್ನಿ ಅವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶರಣು ಸಜ್ಜನ ಹಾಗೂ ಕೆಲವರನ್ನು ಬಂಧಿಸ ಲಾಗಿತ್ತು

 

ಬಾದಾಮಿ ಠಾಣೆಗೆ ಕರೆ ತಂದು ಅವರ ಮೇಲೆ ಲಾಠಿಯಿಂದ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಗಳು ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದರು ಹಾಗಾಗಿ ಸಿಪಿಐ ಅವರನ್ನು ಅಮಾನತು ಮಾಡಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.