This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಬೆಳಗಾವಿ

ಇನ್ಸ್ಪೆಕ್ಟರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ KAT – ಹಾಲಿ ಸ್ಥಾನದಲ್ಲಿ ಮುಂದುವರೆಸುವಂತೆ ಆದೇಶ…..

ಇನ್ಸ್ಪೆಕ್ಟರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ KAT – ಹಾಲಿ ಸ್ಥಾನದಲ್ಲಿ ಮುಂದುವರೆಸುವಂತೆ ಆದೇಶ…..
WhatsApp Group Join Now
Telegram Group Join Now

ಖಾನಾಪುರ

ಇನ್ಸ್ಪೆಕ್ಟರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ KAT – ಹಾಲಿ ಸ್ಥಾನದಲ್ಲಿ ಮುಂದುವರೆಸುವಂತೆ ಆದೇಶ ಹೌದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವಿನ ಪ್ರಕರಣ ದಲ್ಲಿ ಅಮಾನತುಗೊಂಡಿದ್ದ, ಖಾನಾಪುರದ ಇನ್ಸ್ಪೆಕ್ಟರ್ ಮಂಜುನಾಥ ನಾಯ್ಕ್‌ ಅವರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ತಡೆ ನೀಡಿದೆ.ಅಲ್ಲದೇ, ಮಂಜುನಾಥ ಅವರನ್ನು ಹಾಲಿ ಸ್ಥಾನದಲ್ಲೇ ಮುಂದುವರಿಸಬೇಕು ಎಂದು ಆದೇಶಿಸಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (ಡಿ.19) ನಡೆದ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂಬ ಆರೋಪದ ಮೇರೆಗೆ ಸಿ.ಟಿ. ರವಿ ಅವರನ್ನು ಬಂಧಿಸ ಲಾಗಿತ್ತು. ತಡರಾತ್ರಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಗಿತ್ತು.

ಅಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಇಲಾಖೆಯ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ರವಿ ಅವರ ಬಂಧನ ಮತ್ತು ಅವರನ್ನು ಖಾನಾಪುರ ಠಾಣೆಗೆ ಕರೆ ತಂದಿದ್ದ ಪೊಲೀಸರ ನಡೆ ಖಂಡಿಸಿ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು.

ಅದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಬಿಜೆಪಿ ನಾಯಕರಿಗೆ ಸಿ.ಟಿ ರವಿ ಅವರನ್ನು ಭೇಟಿಯಾಗಲು ಮಂಜುನಾಥ ನಾಯ್ಕ ಅವರು ಅವಕಾಶ ನೀಡಿದ್ದರು ಎಂಬ ಆರೋಪದ ಮೇಲೆ ಅಮಾನತುಗೊಳಿಸ ಲಾಗಿತ್ತು.

ಆದೇಶದ ವಿರುದ್ಧ ಮಂಜುನಾಥ ಅವರು ಕೆಎಟಿ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸತ್ಯನಾರಾಯಣ ಸಿಂಗ್ ಮತ್ತು ಸುನೀಲ ಕುಮಾರ ಅವರನ್ನೊಳಗೊಂಡ ಪೀಠ ‘ಡಿ.21, 2024ರಂದು ಪೊಲೀಸ್ ಇಲಾಖೆ ಹೊರಡಿಸಿದ್ದ ಮಂಜುನಾಥ ನಾಯ್ಕ ಅವರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅವರನ್ನು ಖಾನಾಪುರ ಠಾಣೆಯ ಇನ್‌ಸ್ಪೆಕ್ಟರ್‌ ಹುದ್ದೆಯಲ್ಲೇ ಮುಂದುವರೆಸಬೇಕು’ ಎಂದು ಆದೇಶಿಸಿದೆ.

ಸುದ್ದಿ ಸಂತೆ ನ್ಯೂಸ್ ಖಾನಾಪುರ…..


Google News

 

 

WhatsApp Group Join Now
Telegram Group Join Now
Suddi Sante Desk