ಬೆಂಗಳೂರು –
ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳ ಮಾಹಿತಿಯನ್ನು ತುರ್ತಾಗಿ ಪಟ್ಟಿಮಾಡಿ ಕಳುಹಿ ಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಸಂಬಂಧ ಆಗಸ್ಟ್ 24 ಮತ್ತು 25ರಂದು ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲೇ ಸ್ಪಷ್ಟ ಸೂಚನೆ ನೀಡಿದ್ದರೂ ಇದುವರೆಗೆ ಬೆಂಗಳೂರು ನಗರ ಸೇರಿದಂತೆ ಕೇವಲ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ಮಾತ್ರ ಶಾಲೆಗಳ ಪಟ್ಟಿಕಳುಹಿಸಿ ದ್ದು ಉಳಿದ ಜಿಲ್ಲೆಗಳಿಂದ ಯಾವುದೇ ಮಾಹಿತಿ ಬಂದಿಲ್ಲ.
ಹೀಗಾಗಿ ಇಲಾಖಾ ಆಯುಕ್ತ ಆರ್ ವಿಶಾಲ್ ಅವರು ಬುಧವಾರ ಮತ್ತೊಮ್ಮೆ ಅಧಿಕಾರಿಗಳಿಗೆ ಜ್ಞಾಪನ ಪತ್ರ ಹೊರಡಿಸಿದ್ದಾರೆ.ಮಾಹಿತಿ ಕಳುಹಿಸುವುದನ್ನು ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವು ದಾಗಿಯೂ ಎಚ್ಚರಿಕೆ ನೀಡಿದ್ದಾರೆ.