ಹೊಸ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯಕ್ರಮ – ಪಠ್ಯಪುಸ್ತಕ ಗಳನ್ನು ವಿತರಣೆ ಮಾಡುವಂತೆ ಸೂಚನೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿ ಯನ್ವಯ 2022-23 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.