ಬೆಂಗಳೂರು –
ಕೋವಿಡ್ ಹಾಗೂ ಮೂರನೇಯ ಅಲೆಯನ್ನು ಗಮನದಲ್ಲಿಟ್ಟುಕೊಂಡು ವಾರದಲ್ಲಿ ಐದು ದಿನ ಶಾಲೆ ಗೆ ಅವಕಾಶವನ್ನು ನೀಡಲಾಗಿದೆ. ಹೌದು ಕೋವಿಡ್ ಹೊಸ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಾರದ ಐದು ದಿನ 6 ರಿಂದ 12ನೇ ತರಗತಿವರೆಗೆ ಶಾಲೆ,ಕಾಲೇಜುಗಳಲ್ಲಿ ಶೇ.100 ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು
ಶನಿವಾರ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ.ಕೋವಿಡ್ 19 ತಜ್ಞರ ಸಲಹೆ,ಸೂಚನೆಯಂತೆ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100 ರಷ್ಟು ಹಾಜರಾತಿಯೊಂದಿಗೆ ಶಾಲಾ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ.
ವಿದ್ಯಾರ್ಥಿಗಳು,ಶಿಕ್ಷಕರು,ಬೋಧಕೇತರ ಸಿಬ್ಬಂದಿ ಹಾಗೂ ಶಾಲಾ,ಕಾಲೇಜುಗಳ ಆಡಳಿತ ಮಂಡಳಿಗಳ ಸಹಕಾರ,ಕೋವಿಡ್-19 ಸುರಕ್ಷತಾ ನಿಯಮಗಳ ಪಾಲನೆ,ಯಶಸ್ವಿ ಕೋವಿಡ್-19 ಲಸಿಕೆ ಅಭಿಯಾನ ದಿಂದ ಕೋವಿಡ್-19 ಮೂರನೇ ಅಲೆಯ ಭೀತಿ ಕಡಿಮೆ ಆಗಿದೆ.ಈ ಹಿನ್ನೆಲೆಯಲ್ಲಿ 6 ರಿಂದ 12ನೇ ವರ್ಗದವರೆಗಿನ ತರಗತಿಗಳನ್ನು ಪೂರ್ಣ ಪ್ರಮಾಣ ದಲ್ಲಿ ಆರಂಭಿಸಲು ಅನುಮತಿ ನೀಡಲಾಗಿದೆ.