ಬೆಂಗಳೂರ –
2022-23ನೇ ಸಾಲಿಗೆ ಸಮಗ್ರ ಶಿಕ್ಷಣ – ಕರ್ನಾಟಕ ಯೋಜನೆಯ ಅಡಿಯಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ವೇತನಕ್ಕಾಗಿ ಎರಡನೇ ತ್ರೈಮಾಸಿಕ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶವನ್ನು ಮಾಡಿದೆ
ಈ ಕುರಿತು ಸಮಗ್ರ ಶಿಕ್ಷಣ-ಕರ್ನಾಟಕದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.2022-23ನೇ ಸಾಲಿಗೆ ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಕರ,ಡಿವೈಪಿಸಿಸಿ,ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನಕ್ಕಾಗಿ 2022-23ನೇ ಸಾಲಿಗೆ ನಿಗದಿಪಡಿಸಲಾಗಿರುವ ಅನುದಾನದಲ್ಲಿ ಎರಡನೇ ತ್ರೈಮಾಸಿಕ ವೇತನ ಅನುದಾನದಲ್ಲಿ ಜೂನ್-2022 ಮತ್ತು ಜುಲೈ-2022 ವೇತನಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಲ್ಲೇಖ ಮಾಡಿ ಆದೇಶವನ್ನು ಮಾಡಿದ್ದಾರೆ.
ಸಮಗ್ರ ಶಿಕ್ಷಣ-ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದ್ದಾರೆ.