ಚಿಕ್ಕಮಗಳೂರು –
ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಇನ್ನೂ ಮಳೆಯ ಆರ್ಭಟಕ್ಕೆ ಜನ ಸಾಮಾನ್ಯರು ಪರದಾಡುತ್ತಿದ್ದು ಈ ನಡುವೆ ಶಾಲೆ ಬಿಟ್ಟು ಮನೆಗೆ ತೆರಳುವಾಗ ಹಳ್ಳದಲ್ಲಿ ಬಾಲಕಿಯೊಬ್ಬಳು ಕೊಚ್ಚಿಕೊಂಡು ಹೋಗಿದ್ದಾಳೆ ಬಾಲಕಿ.
ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಅಣ್ಣನ ಜೊತೆ ಶಾಲೆ ಮುಗಿಸಿ ಬರುವಾಗ ಕೊಚ್ಚಿ ಹೋಗಿದ್ದಾಳೆ ಸುಪ್ರೀತಾ(7).ಸುಪ್ರೀತಾ, ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಯಾಗಿದ್ದು ಇನ್ನೂ ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬಾಲಕಿಗಾಗಿ ಶೋಧ ಕಾರ್ಯ ವನ್ನು ಮಾಡತಾ ಇದ್ದಾರೆ.ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.