ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ – ಹಲವು ವಿಚಾರಗಳ ಕುರಿತಂತೆ ಚರ್ಚೆ ಸಿಗದ ಸ್ಪಷ್ಟ ಮಾಹಿತಿ…..

Suddi Sante Desk

ಬೆಂಗಳೂರು –

ನಾಡಿನ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಚರ್ಚೆ ಮಾಡಲು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅಧ್ಯಕ್ಷತೆ ಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು.ಮಾನ್ಯ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಚಾರಗಳ ಕುರಿತಂತೆ ಚರ್ಚೆ ಮಾಡಲಾಯಿತು.

ಪ್ರಮುಖವಾಗಿ ಈ ಒಂದು ಸಭೆಯಲ್ಲಿ ಸಧ್ಯ ದೊಡ್ಡ ಸಮಸ್ಯೆಯಾಗಿರುವ ಶಿಕ್ಷಕರ ವರ್ಗಾವಣೆ ವಿಚಾರ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತಂತೆ ಚರ್ಚೆಯನ್ನು ಮಾಡಲಾಯಿತು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ, ಇಲಾಖೆ ಯ ಆಯುಕ್ತರಾದ ಅನ್ವಕುಮಾರ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಸೇರಿದಂತೆ ಹಲವರು ಈ ಒಂದು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇನ್ನೂ ಸಭೆಯಲ್ಲಿ ಚರ್ಚೆಯಾಗಿದ್ದು ವಿಚಾರ ಒಂದು ಕಡೆಯಾದರೆ ಇನ್ನೂ ಸಮಸ್ಯೆಗಳ ಕುರಿತಂತೆ ತಗೆದುಕೊಂಡ ತಿರ್ಮಾನಗಳೇನು ಸಭೆಯಿಂದ ಏನಾದರೂ ಮಹತ್ವದ ಸಂದೇಶ ಸಿಹಿ ಸುದ್ದಿ ನಾಡಿನ ಶಿಕ್ಷಕರಿಗೆ ಸಿಕ್ಕಿತಾ ಹೀಗೆ ಹತ್ತಾರ ವಿಚಾರ ಕುರಿತಂತೆ ಸ್ಪಷ್ಟವಾದ ಸಭೆಯ ಮಾಹಿತಿಯನ್ನು ನಾಡಿನ ಶಿಕ್ಷಕರು ನಿರೀಕ್ಷೆ ಮಾಡುತ್ತಿದ್ದಾರೆ. ಒಂದು ವೇಳೆ ಈಗಾಗಲೇ ನಡೆದ ಸಭೆಯಂತೆ ಇದೊಂದು ಸಭೆ ಎಂದುಕೊಂಡು ಸುಮ್ಮನೇ ಕುಳಿತುಕೊಳ್ಳಬೇಕು ಅಷ್ಟೇ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.