ಮೇ 1 ರಂದು ಆ ನಾಲ್ವರ ಕೊಲೆ – ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟ ಮಾಜಿ ಸಚಿವೆ…..

Suddi Sante Desk

ಬೆಂಗಳೂರು –

ಮಾಜಿ ಸಚಿವ ಎಚ್‌.ಎಂ ರೇವಣ್ಣ ಅವರಿಗೆ ಬೆಂಗ ಳೂರಿನಲ್ಲಿ ಇಂದು ಅಭಿನಂದನೆ ಸಮಾರಂಭ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಜೀವನ ದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜನೆ ಮಾಡಿರುವ ಈ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಸ್ಫೋಟಕ ಹೇಳಿಕೆ ನೀಡಿದ್ದು ಬರುವ ಮೇ 1ರಂದು ನಾಲ್ಕು ಮಂದಿ ಗಣ್ಯರ ಕೊಲೆ ಮಾಡುವ ಬೆದರಿಕೆ ಪತ್ರ ಬಂದಿರುವುದಾಗಿ ಹೇಳಿದರು.

ಬಿಜೆಪಿ ಶಾಸಕ ಸಿ ಟಿ ರವಿ, ಪತ್ರಕರ್ತ ರಂಗಣ್ಣ, ನಟ ಶಿವರಾಜಕುಮಾರ್ ಹಾಗೂ ತಮ್ಮನ್ನು ಕೊಲೆ ಮಾಡುವ ಪತ್ರ ಬಂದಿದೆ. ಅದನ್ನು ಪೊಲೀಸರು ಪರಿಶೀಲನೆ ಮಾಡ್ತಾ ಇದ್ದಾರೆ ಎಂದು ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನದಾಗಿ ಅವರು ಯಾವುದೇ ವಿವರಣೆ ನೀಡಲಿಲ್ಲ.

ಬದಲಿಗೆ, ಸಿ ಟಿ ರವಿರನ್ನು ಕೊಲೆ ಮಾಡಿದ್ರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದ್ರೆ ಸಿ ಟಿ ರವಿ ಉಳಿತಾರೆ. ಇಂತಹ ಸಂದರ್ಭ ಎದುರಾಗಿದೆ ಎಂದು ನಿಗೂಢವಾಗಿ ಹೇಳಿದರು. ನಾನು ಈ ಬೆದರಿಕೆ ಪತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಕೊಲೆ ಮಾಡೋದಾದರೆ ಎಲ್ಲಿ ಬೇಕಾದರೂ ಕೊಲೆ ಮಾಡ್ತಾರೆ. ಹಾಗಾಗಿ ನಾನು ಹೆದರದೇ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿದ್ದೇನೆ ಎಂದು ಬಿ.ಟಿ.ಲಲಿತಾ ನಾಯಕ್ ಹೇಳಿದರು.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಸಭಾಪತಿ ಬಸವರಾಜ್ ಹೊರಟ್ಟಿ, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕವಿ ಪ್ರೊ. ಸಿದ್ದಲಿಂಗಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರೇವಣ್ಣ ಜೀವನ ಕುರಿತು ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.