ಹಾವೇರಿ –
ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಭಾಸ್ಕರ್ ಟಿ.ಎಂ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಆದೇಶ ಹೊರಡಿ ಸಿದ್ದಾರೆ.ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಪ್ರೊ.ಭಾಸ್ಕರ್ ಅವರು ಪ್ರಸ್ತುತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸು ತ್ತಿದ್ದಾರೆ.
ಭಾಸ್ಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಹಾವೇರಿಯ ಸ್ನಾತಕೋತ್ತರ ಕೇಂದ್ರದಲ್ಲಿ 8 ವರ್ಷ ಆಡಳಿತಾಧಿಕಾರಿಯಾಗಿ ಹಾಗೂ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕುಲಸಚಿವ ರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.
ಕುಲಪತಿಯಾಗಿದ್ದ ಡಾ.ಡಿ.ಬಿ.ನಾಯಕ್ ಅವರ ಆಡಳಿತಾ ವಧಿ 2022ರ ಫೆಬ್ರುವರಿ 21ಕ್ಕೆ ಅಂತ್ಯಗೊಂಡಿತ್ತು ನಂತರ ಪ್ರೊ.ಕೆ.ಎನ್.ಗಂಗಾನಾಯಕ್ ಆನಂತರ ಪ್ರೊ.ಸಿ.ಟಿ. ಗುರುಪ್ರಸಾದ್ ಅವರು ಪ್ರಭಾರ ಕುಲಪತಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.ಸಧ್ಯ ಪೂರ್ಣ ಪ್ರಮಾಣದ ಕುಲಪತಿ ಅವರನ್ನು ನೇಮಕ ಮಾಡಲಾಗಿದೆ.